8:21 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು