12:35 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು