6:30 PM Friday9 - May 2025
ಬ್ರೇಕಿಂಗ್ ನ್ಯೂಸ್
J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

ಇತ್ತೀಚಿನ ಸುದ್ದಿ

34 ವರ್ಷ ಹಳೆ ಕೇಸ್!: ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ; ಏನಿದು ಹಳೆ ಪ್ರಕರಣ?

20/05/2022, 18:50

ಹೊಸದಿಲ್ಲಿ(reporterkarnataka.com); ಬರೋಬ್ಬರಿ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

1988ರಲ್ಲಿ ಈ ಘಟನೆ ನಡೆದಿದೆ. ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣ ಇದಾಗಿದೆ. ಇದೀಗ 34 ವರ್ಷದ ಬಳಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ಶಿಕ್ಷೆ ನೀಡಿದೆ.

ಏನಿದು ಹಳೆ ಪ್ರಕರಣ..?: 1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ, ಕೋರ್ಟ್‌ ಬಳಿಕ ಈ ಪ್ರಕಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಸುಪ್ರೀ ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ ಮತ್ತು ಸಂಜಯ್ ಕಿಶನ್ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.

ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು