6:52 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ

20/05/2022, 23:38

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. 

ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಎಂಸಿಎಫ್ ಸಂಸ್ಥೆಯ ಸಹಕಾರದೊಂದಿಗೆ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರು ವೈದ್ಯರನ್ನು ನೇಮಕಗೊಳಿಸಲು ಜಿಲ್ಲಾಡಳಿತದೊಂದಿಗೆ ಬಹಳಷ್ಟು ಸಹಕಾರ ನೀಡಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಸದ್ಯ ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವೈದ್ಯರನ್ನು ನೇಮಿಸಲಾಗಿದೆ ಎಂದರು.

ತೋಟ ಬೆಂಗ್ರೆ, ಕಸಬಾ ಬೆಂಗ್ರೆ ಹಾಗೂ ಬೊಕ್ಕಪಟ್ಣ ಬೆಂಗ್ರೆ ಪರಿಸರದ ನಾಗರಿಕರು ಚಿಕಿತ್ಸೆಗಾಗಿ ನಗರಕ್ಕೆ ಬರಬೇಕಾಗಿತ್ತು. ಬೆಂಗ್ರೆಯಲ್ಲಿ ಆರೋಗ್ಯ ಕೇಂದ್ರ ಪುನರಾರಂಭಿಸುವುದರಿಂದ ನಾಗರಿಕರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವ‌ ಸೌಲಭ್ಯ ಒದಗಿಸಲಾಗಿದೆ. ಬೆಂಗ್ರೆ ಪರಿಸರದ ಸಾರ್ವಜನಿಕರು ನಗರವನ್ನೇ ಅವಲಂಬಿಸಿರುವುದರಿಂದ ಬೇಡಿಕೆಗಳನ್ನು ಇಲ್ಲಿಯೇ ಪೂರೈಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ ಎಂ.ಸಿ.ಎಫ್ ಸಂಸ್ಥೆಯ ಪ್ರಮುಖರಿಗೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಪ್ರಮುಖರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಬೆಂಗ್ರೆಯ ನಾಗರಿಕರು ಪ್ರತಿಯೊಂದು ವಿಚಾರಕ್ಕೂ ಸುತ್ತು ಬಳಸಿ ಬರಬೇಕಾಗಿರುವುದರಿಂದ ಇಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ ಬಹಳಷ್ಟು ಉಪಯೋಗಕರವಾಗಿದೆ. ಈ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಎಂ.ಸಿ.ಎಫ್ ಮೆಡಿಕಲ್ ಚೀಫ್ ಡಾ. ಯೋಗೀಶ್ ಭಟ್, ಪಿ.ಆರ್.ಒ ಅವಿನಂದ್, ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ರಾವ್, ಆರೋಗ್ಯಾಧಿಕಾರಿ ಕಿಶೋರ್ ಕೊಟ್ಟಾರಿ, ತಾಲೂಕು ಆರೋಗ್ಯಧಿಕಾರಿ ಸುಜಯ್ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಬೆಂಗ್ರೆ, ಮಹಾಜನ ಸಭಾ ಉಪಾಧ್ಯಕ್ಷರಾದ ನರಸಿಂಹ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಹೇಮಚಂದ್ರ, ಕಸಬಾ ಬೆಂಗ್ರೆ ಮಸೀದಿಯ ಅಧ್ಯಕ್ಷರಾದ ಬಿಲಾಲ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು