1:02 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ

20/05/2022, 23:38

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. 

ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಎಂಸಿಎಫ್ ಸಂಸ್ಥೆಯ ಸಹಕಾರದೊಂದಿಗೆ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರು ವೈದ್ಯರನ್ನು ನೇಮಕಗೊಳಿಸಲು ಜಿಲ್ಲಾಡಳಿತದೊಂದಿಗೆ ಬಹಳಷ್ಟು ಸಹಕಾರ ನೀಡಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಸದ್ಯ ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವೈದ್ಯರನ್ನು ನೇಮಿಸಲಾಗಿದೆ ಎಂದರು.

ತೋಟ ಬೆಂಗ್ರೆ, ಕಸಬಾ ಬೆಂಗ್ರೆ ಹಾಗೂ ಬೊಕ್ಕಪಟ್ಣ ಬೆಂಗ್ರೆ ಪರಿಸರದ ನಾಗರಿಕರು ಚಿಕಿತ್ಸೆಗಾಗಿ ನಗರಕ್ಕೆ ಬರಬೇಕಾಗಿತ್ತು. ಬೆಂಗ್ರೆಯಲ್ಲಿ ಆರೋಗ್ಯ ಕೇಂದ್ರ ಪುನರಾರಂಭಿಸುವುದರಿಂದ ನಾಗರಿಕರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವ‌ ಸೌಲಭ್ಯ ಒದಗಿಸಲಾಗಿದೆ. ಬೆಂಗ್ರೆ ಪರಿಸರದ ಸಾರ್ವಜನಿಕರು ನಗರವನ್ನೇ ಅವಲಂಬಿಸಿರುವುದರಿಂದ ಬೇಡಿಕೆಗಳನ್ನು ಇಲ್ಲಿಯೇ ಪೂರೈಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ ಎಂ.ಸಿ.ಎಫ್ ಸಂಸ್ಥೆಯ ಪ್ರಮುಖರಿಗೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಪ್ರಮುಖರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಬೆಂಗ್ರೆಯ ನಾಗರಿಕರು ಪ್ರತಿಯೊಂದು ವಿಚಾರಕ್ಕೂ ಸುತ್ತು ಬಳಸಿ ಬರಬೇಕಾಗಿರುವುದರಿಂದ ಇಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ ಬಹಳಷ್ಟು ಉಪಯೋಗಕರವಾಗಿದೆ. ಈ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಎಂ.ಸಿ.ಎಫ್ ಮೆಡಿಕಲ್ ಚೀಫ್ ಡಾ. ಯೋಗೀಶ್ ಭಟ್, ಪಿ.ಆರ್.ಒ ಅವಿನಂದ್, ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ರಾವ್, ಆರೋಗ್ಯಾಧಿಕಾರಿ ಕಿಶೋರ್ ಕೊಟ್ಟಾರಿ, ತಾಲೂಕು ಆರೋಗ್ಯಧಿಕಾರಿ ಸುಜಯ್ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಬೆಂಗ್ರೆ, ಮಹಾಜನ ಸಭಾ ಉಪಾಧ್ಯಕ್ಷರಾದ ನರಸಿಂಹ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಹೇಮಚಂದ್ರ, ಕಸಬಾ ಬೆಂಗ್ರೆ ಮಸೀದಿಯ ಅಧ್ಯಕ್ಷರಾದ ಬಿಲಾಲ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು