11:12 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಪೆಗಾಸಸ್‌ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್‌

21/05/2022, 10:05

ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್‌ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್‌ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. 

ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲು ಪೆಗಾಗಸಸ್‌ ಸಾಫ್ಟ್‌ ವೇರ್‌ ಬಳಕೆಯಾಗಿರುವ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ರವೀಂದ್ರನ್‌ ಅವರ ನೇತೃತ್ವದಲ್ಲಿ 2021 ಅಕ್ಟೋಬರ್‌ ನಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆಗೆ ಅದೇಶ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ʼಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಾಧನಗಳನ್ನು ಪರೀಕ್ಷಿಸಲು ಸಮಿತಿಯು ತನ್ನದೇ ಆದ ಸಾಫ್ಟ್‌ ವೇರ್‌ ಅಭಿವೃದ್ಧಿ ಪಡಿಸಿದೆ, ಈ ಸಂಬಂಧ ವಿವಿಧ ಸರ್ಕಾರಿ ಏಜನ್ಸಿಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ಧಾರೆ. ಇನ್ನು ಈ ಕುರಿತು ತಾಂತ್ರಿಕ ಸಮಿತಿಯು ಪೆಗಾಸಸ್‌ ಸಾಧನಗಳ ಪರಿಶೀಲನೆಗೆ ಸ್ಟಾಂಡರ್ಡ್‌ ಆಪರೇಟಿಂಗ್‌ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತಿದ್ದು ಮೇ ಅಂತ್ಯದ ವೇಳೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು