2:57 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು