2:51 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಭಾರಿ ವರುಣಾಘಾತ: ರಸ್ತೆ ಸಂಚಾರ ವ್ಯತ್ಯಯ; ಹಲವು ವಿಮಾನ ಯಾನ ರದ್ದು

23/05/2022, 17:45

ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ.

ಭಾರಿ ಗಾಳಿ ಮಳೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಮರಗಳು ಧರೆಗುರುಳಿವೆ. ಇದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೆ ಮಳೆಯು ಪ್ರತಿಕೂಲ ಪರಿಣಾಮ ಬೀರಿದ್ದು ಹಲವು ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ. ನವೀಕರಿಸಿದ ವಿಮಾನ ಮಾಹಿತಿಗಾಗಿ ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರನ್ನು ಕೋರಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಮಧ್ಯಮ ತೀವ್ರತೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಗಂಟೆಗೆ 60-90 ಕಿ.ಮಿ. ವೇಗದಲ್ಲಿ ಬಿರುಗಾಳಿಯು ಮುಂದುವರಿಯಲಿದೆ ಎಂದು ತಿಳಿಸಿದೆ. ಜನಸಾಮಾನ್ಯರು ಮನೆಯಿಂದ ಹೊರಬೀಳದೇ ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು