1:47 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ 

23/05/2022, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳಿಗೆ ಸೋಮವಾರ ಕೃಷಿ ಅಧಿಕಾರಿ ವೆಂಕಟೇಶ್ ಎಂ.ಆರ್. ಅವರು ದಿಢೀರ್ ದಾಳಿ ನಡೆಸಿ ರಸಗೊಬ್ಬರ ದಾಸ್ತಾನು, ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. 

ವಿವಿಧ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿಗಳನ್ನು  ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಯಿತು ಹಾಗೂ ನಿಯಮ ಪಾಲಿಸದ ರಸಗೊಬ್ಬರ ಮಾರಾಟಗಾರರಿಗೆ ನೋಟಿಸನ್ನು ನೀಡಿ ಮತ್ತೊಮ್ಮೆ ನಿಯಮ ಉಲ್ಲಂಘನೆ ಕಂಡು ಬಂದರೆ ಅಧಿಕೃತ ಪರವಾನಗಿಯನ್ನು ರದ್ದು ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ತಾಲೂಕಿನಲ್ಲಿ ಮುಂಗಾರು ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ರಸಗೊಬ್ಬರಗಳ ದಾಸ್ತಾನು ಇದೆ 


ಕಡಿಮೆ ಇರುವ ರಸಗೊಬ್ಬರಗಳನ್ನು ದಾಸ್ತಾನು ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ರೈತರು ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಬೇಕು ಹಾಗೂ ರಸಗೊಬ್ಬರ ಮಾರಾಟ ಗಾರರು ಎಂಆರ್ಪಿ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ರಸಗೊಬ್ಬರವನ್ನು ರೈತರಿಗೆ ವಿತರಿಸುವಾಗ  ಪಿಓಎಸ್ ಮಿಷಿನ ಮುಖಾಂತರ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ಪ್ರದೀಪ್ ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು