11:10 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಆಶಾ ಕಾರ್ಯಕರ್ತೆಯರಿಗೆ ವಿಶ್ವ ಆರೋಗ್ಯ ಸಂಸ್ಥೆ ಗೌರವ: ಪ್ರಧಾನಿ ಮೋದಿ ಅಭಿನಂದನೆ

23/05/2022, 18:08

ಹೊಸದಿಲ್ಲಿ(reporterkarnataka.com): ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ.ಟೆಡ್ರೊಸ್‌ ಅಧಾನೊಮ್ ಘೆಬ್ರೆಯೆಸಸ್ ಅವರು ಭಾರತದ ಆಶಾ ಕಾರ್ಯಕರ್ತೆಯರಿಗೆ ʻಜಾಗತಿಕ ಆರೋಗ್ಯ ನಾಯಕʼ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ, ಆರೋಗ್ಯಕರ ಭಾರತ ಅಭಿಯಾನದಲ್ಲಿ ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿದರು.

“ಭಾರತದಲ್ಲಿ ಆಶಾ ಕಾರ್ಯಕರ್ತರ ತಂಡಕ್ಕೆ WHO ಮಹಾನಿರ್ದೇಶಕರು ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿಯನ್ನು ನೀಡಿರುವುದಕ್ಕೆ ಸಂತೋಷವಾಗಿದೆ. ಆರೋಗ್ಯಕರ ಭಾರತವನ್ನು ಖಾತ್ರಿಪಡಿಸುವಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸಮರ್ಪಣಾ ಮನೋಭಾವ ಪ್ರಶಂಸನೀಯವಾಗಿದೆ” ಎಂದರು.

ಆಶಾ (ಹಿಂದಿಯಲ್ಲಿ ಭರವಸೆ ಎಂದರ್ಥ) ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು ಅಥವಾ ಆಶಾ ಕಾರ್ಯಕರ್ತೆಯರು. ಗ್ರಾಮೀಣ ಭಾರತದ ಸಂಪರ್ಕ ಬಿಂದುವಾಗಿದ್ದಾರೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಂತ ಸಂಕಷ್ಟ ಕಾಲದಲ್ಲಿ ಮನೆ-ಮನೆಗೆ ತೆರಳಿ ಕೊರೊನಾ ವೈರಸ್ ಪೀಡಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ದೊರೆಯುವಂತೆ ಮಾಡುವ ಮೂಲಕ ಗ್ರಾಮೀಣ ಭಾರತದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯವಾದುದಾಗಿದೆ.

ರೋಗಗಳನ್ನು ತಡೆಗಟ್ಟಬಹುದಾದ ಲಸಿಕೆ, ಸಮುದಾಯ ಆರೋಗ್ಯ ರಕ್ಷಣೆ, ಅಧಿಕ ರಕ್ತದೊತ್ತಡ ಮತ್ತು ಕ್ಷಯರೋಗಕ್ಕೆ ಚಿಕಿತ್ಸೆ, ಪೌಷ್ಟಿಕತೆ, ನೈರ್ಮಲ್ಯ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಚಾರ, ಮಕ್ಕಳಿಗೆ ತಾಯಿಯ ಆರೈಕೆ ಈ ಎಲ್ಲಾ ಕ್ಷೇತ್ರಗಳಲ್ಲಿ ಆಶಾ ಕಾರ್ಯಕರ್ತೆಯರು ಅವಿರತವಾಗಿ ಶ್ರಮಿಸಿದ್ದಾರೆ ಎಂದು WHO ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

“ಜಗತ್ತು ಅಸಮಾನತೆ, ಸಂಘರ್ಷ, ಆಹಾರ ಅಭದ್ರತೆ, ಹವಾಮಾನ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ರೋಗಗಳ ಅಭೂತಪೂರ್ವ ಒಮ್ಮುಖವನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ಪ್ರಶಸ್ತಿಯು ಪ್ರಪಂಚದಾದ್ಯಂತ ಆರೋಗ್ಯವನ್ನು ರಕ್ಷಿಸಲು ಮತ್ತು ಉತ್ತೇಜಿಸಲು ಅತ್ಯುತ್ತಮ ಕೊಡುಗೆ ನೀಡಿದವರನ್ನು ಗುರುತಿಸುತ್ತದೆ” ಎಂದು WHO ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅಭಿಪ್ರಾಯಪಟ್ಟಿದ್ದಾರೆ.

ಆಶಾ ಕಾರ್ಯಕರ್ತರನ್ನು ಶ್ಲಾಘಿಸಿದ WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕ ಡಾ ಪೂನಂ ಖೇತ್ರಪಾಲ್ ಸಿಂಗ್, “ಆಶಾ ಕಾರ್ಯಕರ್ತೆಯರು ಆರೋಗ್ಯದ ನಿಜವಾದ ಚಾಂಪಿಯನ್ ಆಗಿದ್ದು, ಪ್ರಾಥಮಿಕ ಆರೋಗ್ಯವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಹಾಯ ಮಾಡುತ್ತಾರೆ. ಅವರ ಕೆಲಸ ಯಾವಾಗಲೂ ಇತರರಿಗೆ ಮಾದರಿಯಾಗಿದೆ, ವಿಶೇಷವಾಗಿ ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಅವರು ಮಾಡಿದ ಸೇವೆಯನ್ನು ಗಮನಿಸಿ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು