2:46 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಪೆಟ್ರೋಲ್, ಡೀಸೆಲ್ ಖರೀದಿಯಲ್ಲಿ ರೇಷನಿಂಗ್:  ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ

24/05/2022, 07:23

ಮಂಗಳೂರು(reporterkarnataka.com):ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯಲ್ಲಿ ರೇಷನಿಂಗ್ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಶ್ರೀಲಂಕಾ ಮಾದರಿನ್ನು ತಲುಪುವ ಸಾಧ್ಯತೆ ಇದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ ವ್ಯಕ್ತಪಡಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೆಟ್ರೋಲಿಯಂ ಕಂಪೆನಿಗಳು ಪೆಟ್ರೋಲ್ ಬಂಕ್‌ಗಳಿಗೆ ಸಮರ್ಪಕವಾಗಿ ಪೆಟ್ರೋಲ್, ಡೀಸೆಲ್ ಅನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ೨ ಟ್ಯಾಂಕ್ ಕೇಲಿದಲ್ಲಿ ಒಂದು ಟ್ಯಾಂಕ್, ಪ್ರತೀ ದಿನ ಕೇಳಿದರೂ ೨ ದಿನಗಳಿಗೊಮ್ಮೆ ನೀಡುತ್ತಿದ್ದು, ಪೆಟ್ರೋಲಿಯಂ ಕಂಪೆನಿಗಳು ರೇಷನಿಂಗ್ ಪ್ರಾರಂಭಿಸಿದಂತಾಗಿದ್ದು, ಇದಕ್ಕೆ ಸರ್ಕಾರದ ವೈಫಲ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಪ್ರತೀ ಪೆಟ್ರೋಲ್ ಬಂಕ್‌ನವರು ಒಂದು ಲೀಟರ್‌ಗೆ ೨೦ ರೂ. ನಷ್ಠವನ್ನು ಅನುಭವಿಸುತ್ತಿದ್ದು, ಪೆಟ್ರೋಲ್ ಡೀಸೆಲ್ ಮೇಲೆ ಶೇ.೩೦ ತೆರಿಗೆ ವಿಧಿಸಿ ಶೋಷಣೆಗೊಳಪಡಿಸಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶೇ.೩-೯ ತೆರಿಗೆ ಇದ್ದು, ಜನರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಪೆಟ್ರೋಲಿಯಂ ಕಂಪೆನಿಗಳಿಗೆ ಸಬ್ಸಿಡಿ ನೀಡಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದರು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಕ್ರೂಡ್ ಆಯಿಲ್ ೩೦-೪೦ ರೂ. ಸಿಗುವ ಸಂದರ್ಭದಲ್ಲಿ ಕೂಡ ಶೇ.೩೦ ತೆರಿಗೆ ಹೇರಿದ್ದು, ಈಗ ಕ್ರೂಡ್ ಆಯಿಲ್‌ಗೆ ಬ್ಯಾರಲ್‌ಗೆ ೧೨೦-೧೩೦ ರೂ. ಆಗಿರುವಾಗ ಸುಲಿಗೆ ಮಾಡಲು ಹೊರಟಿದ್ದು, ಈಗಾಗಲೇ ಅನೇಕ ಖಾಸಗಿ ಬಂಕ್‌ಗಳು ಮುಚಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಸೌಮ್ಯದಲ್ಲಿರುವ ಬಂಕ್‌ಗಳು ಕೂಡ ಮುಚ್ಚಬೇಕಾದ ಸನ್ನಿವೇಶ ಎದುರಾಗಬಾರದು ಎಂದು ಟೀಕಿಸಿದರು.

ಈಗ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿದ್ದು, ಇದರಲ್ಲಿ ಯಾವುದೇ ದೂರ ದೃಷ್ಠಿ ಕಾಣುತ್ತಿಲ್ಲ. ಕಳೆದ ಬಾರಿ ಪಂಚ ರಾಜ್ಯ ಚುನಾವಣೆಯಲ್ಲಿ ಬೆಲೆ ಇಳಿಸಿ ಮತ್ತೆ ಹೆಚ್ಚಿಸಿದರು ಈಗ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಬರಲಿದ್ದು ಈಗ ಬೆಲೆ ಕಡಿಮೆ ಮಾಡಿದ್ದು, ಚುನಾವಣೆಯ ನಂತರ ಮತ್ತೆ ಬೆಲೆ ಹೆಚ್ಚಿಸಲಿದ್ದಾರೆ. ಇದು ಜನರಿಗೆ ಬೇಕಾಗಿ ಮಾಡಿರುವುದಲ್ಲ, ಕಂಪೆನಿಯನ ನಿಯಮವನ್ನು ಬುಡಮೇಲು ಮಾಡಲು ಹೊರಟಿರುವುದು ಎಂದರು.

ಪ್ರಮುಖರಾದ ಸದಾಶಿವ ಉಳ್ಳಾಲ್, ಇಬ್ರಾಹಿಂ ಕೋಡಿಜಾಲ್, ಮೊಹಮದ್ ಮೋನು, ಕಲಾವತಿ, ಮೊಹಮದ್ ಕುಂಜತ್‌ಬೈಲ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು