7:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸರಕಾರ ಶಬ್ದ ಮಾಲಿನ್ಯದ ಬಗ್ಗೆ  ಸ್ಪಷ್ಟ ನಿಯಮ ಜಾರಿಗೆ ತರಲಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ

24/05/2022, 07:52

ಮಂಗಳೂರು(reporterkarnataka.com): ಶಬ್ದ ಮಾಲಿನ್ಯದ ಬಗ್ಗೆ ಸುಪ್ರಿಂ ಕೋರ್ಟ್ ಆದೇಶ ನೀಡಿದ್ದು, ಇದರ ಬಗ್ಗೆ ಸರ್ಕಾರ ಸ್ಪಷ್ಟ ನಿಯಮವನ್ನು ತರದೆ ಜನರನ್ನು ಗೊಂದಲಕ್ಕೆ ತಳ್ಳುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ಉಪನಾಯಕ
ಯು.ಟಿ. ಖಾದರ್ ಒತ್ತಾಯಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಶಬ್ದ ಮಾಲಿನ್ಯದ ಬಗ್ಗೆ ಅಧಿಕಾರಿಗಳಲ್ಲಾಗಲಿ ಜನ ಪ್ರತಿನಿಧಿಗಳಲ್ಲಾಗಲಿ ಕೇಳಿದರೆ ಅವರಿಗೆ ಏನೂ ಗೊತ್ತಿಲ್ಲ. ಆದುದರಿಂದ ಜನರು ಗೊಂದಲದಲ್ಲಿದ್ದಾರೆ ಅದನ್ನು ನಿವಾರಿಸಬೇಕು ಎಂದರು.

ಭಾರತ ದೇಶವು ಕಾನೂನು ಮತ್ತು ನಿಯಮಗಳಿಗಿಂತ ಹೆಚ್ಚಾಗಿ ಸಾಂಪ್ರದಾಯ ಹಾಗೂ ಸಂಸ್ಕೃತಿಯಲ್ಲಿ ನಡೆಯುತ್ತಿದ್ದು, ರಾತ್ರಿ ೧೦ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯ ತನಕ ಶಬ್ದ ಮಾಲಿನ್ಯ ಮಾಡದಂತೆ ಆದೇಶವನ್ನು ಹೊರಡಿಸಿದ್ದು, ನಮ್ಮ ಸಾಂಪ್ರದಾಯಗಳಾದ ಕೋಲ, ನಾಟಕ, ಉರೂಸ್ ಮೊದಲಾದವುಗಳನ್ನು ಮಾಡಬೇಡಿ ಎನ್ನುವುದಾದರೆ ನಮ್ಮ ಯುವಜನರಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಹೇಗೆ ತಿಳಿಸಿಕೊಡುವುದು. ಈ ನಿಯಮದಿಂದಾಗಿ ಭ್ರಷ್ಟಚಾರ ಹೆಚ್ಚಾಗುತ್ತದೆಯೇ ಹೊರತು ಬೇರೆನೂ ಪ್ರಯೋಜನವಿಲ್ಲ ಎಂದರು.

ನಾರಾಯಣಗುರು ವಿಚಾರವನ್ನು ಪಠ್ಯ ಪುಸ್ತಕದಿಂದ ತೆಗೆದು ಹಾಕಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪಠ್ಯ ಪುಸ್ತಕ ಮುದ್ರಣವಾಗುವ ಮೊದಲು ಪಿಡಿಎಫ್ ಫೈಲ್ ಅನ್ನು ಬಿಟ್ಟಿದ್ದು, ಅದನ್ನು ಈ ಯಾಕೆ ಡಿಲಿಟ್ ಮಾಡಿದ್ದಾರೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಬೇರೆ ಯಾರಾದರೂ ಬಂದು ಅಪ್‌ಲೋಡ್ ಮಾಡುತ್ತಾರಾ ಎಂದು ಯು.ಟಿ. ಖಾದರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು