3:37 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಸರಕಾರ ಶಬ್ದ ಮಾಲಿನ್ಯದ ಬಗ್ಗೆ  ಸ್ಪಷ್ಟ ನಿಯಮ ಜಾರಿಗೆ ತರಲಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ

24/05/2022, 07:52

ಮಂಗಳೂರು(reporterkarnataka.com): ಶಬ್ದ ಮಾಲಿನ್ಯದ ಬಗ್ಗೆ ಸುಪ್ರಿಂ ಕೋರ್ಟ್ ಆದೇಶ ನೀಡಿದ್ದು, ಇದರ ಬಗ್ಗೆ ಸರ್ಕಾರ ಸ್ಪಷ್ಟ ನಿಯಮವನ್ನು ತರದೆ ಜನರನ್ನು ಗೊಂದಲಕ್ಕೆ ತಳ್ಳುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ಉಪನಾಯಕ
ಯು.ಟಿ. ಖಾದರ್ ಒತ್ತಾಯಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಶಬ್ದ ಮಾಲಿನ್ಯದ ಬಗ್ಗೆ ಅಧಿಕಾರಿಗಳಲ್ಲಾಗಲಿ ಜನ ಪ್ರತಿನಿಧಿಗಳಲ್ಲಾಗಲಿ ಕೇಳಿದರೆ ಅವರಿಗೆ ಏನೂ ಗೊತ್ತಿಲ್ಲ. ಆದುದರಿಂದ ಜನರು ಗೊಂದಲದಲ್ಲಿದ್ದಾರೆ ಅದನ್ನು ನಿವಾರಿಸಬೇಕು ಎಂದರು.

ಭಾರತ ದೇಶವು ಕಾನೂನು ಮತ್ತು ನಿಯಮಗಳಿಗಿಂತ ಹೆಚ್ಚಾಗಿ ಸಾಂಪ್ರದಾಯ ಹಾಗೂ ಸಂಸ್ಕೃತಿಯಲ್ಲಿ ನಡೆಯುತ್ತಿದ್ದು, ರಾತ್ರಿ ೧೦ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯ ತನಕ ಶಬ್ದ ಮಾಲಿನ್ಯ ಮಾಡದಂತೆ ಆದೇಶವನ್ನು ಹೊರಡಿಸಿದ್ದು, ನಮ್ಮ ಸಾಂಪ್ರದಾಯಗಳಾದ ಕೋಲ, ನಾಟಕ, ಉರೂಸ್ ಮೊದಲಾದವುಗಳನ್ನು ಮಾಡಬೇಡಿ ಎನ್ನುವುದಾದರೆ ನಮ್ಮ ಯುವಜನರಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಹೇಗೆ ತಿಳಿಸಿಕೊಡುವುದು. ಈ ನಿಯಮದಿಂದಾಗಿ ಭ್ರಷ್ಟಚಾರ ಹೆಚ್ಚಾಗುತ್ತದೆಯೇ ಹೊರತು ಬೇರೆನೂ ಪ್ರಯೋಜನವಿಲ್ಲ ಎಂದರು.

ನಾರಾಯಣಗುರು ವಿಚಾರವನ್ನು ಪಠ್ಯ ಪುಸ್ತಕದಿಂದ ತೆಗೆದು ಹಾಕಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪಠ್ಯ ಪುಸ್ತಕ ಮುದ್ರಣವಾಗುವ ಮೊದಲು ಪಿಡಿಎಫ್ ಫೈಲ್ ಅನ್ನು ಬಿಟ್ಟಿದ್ದು, ಅದನ್ನು ಈ ಯಾಕೆ ಡಿಲಿಟ್ ಮಾಡಿದ್ದಾರೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಬೇರೆ ಯಾರಾದರೂ ಬಂದು ಅಪ್‌ಲೋಡ್ ಮಾಡುತ್ತಾರಾ ಎಂದು ಯು.ಟಿ. ಖಾದರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು