5:15 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರಕಾರ ಶಬ್ದ ಮಾಲಿನ್ಯದ ಬಗ್ಗೆ  ಸ್ಪಷ್ಟ ನಿಯಮ ಜಾರಿಗೆ ತರಲಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ

24/05/2022, 07:52

ಮಂಗಳೂರು(reporterkarnataka.com): ಶಬ್ದ ಮಾಲಿನ್ಯದ ಬಗ್ಗೆ ಸುಪ್ರಿಂ ಕೋರ್ಟ್ ಆದೇಶ ನೀಡಿದ್ದು, ಇದರ ಬಗ್ಗೆ ಸರ್ಕಾರ ಸ್ಪಷ್ಟ ನಿಯಮವನ್ನು ತರದೆ ಜನರನ್ನು ಗೊಂದಲಕ್ಕೆ ತಳ್ಳುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ಉಪನಾಯಕ
ಯು.ಟಿ. ಖಾದರ್ ಒತ್ತಾಯಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಶಬ್ದ ಮಾಲಿನ್ಯದ ಬಗ್ಗೆ ಅಧಿಕಾರಿಗಳಲ್ಲಾಗಲಿ ಜನ ಪ್ರತಿನಿಧಿಗಳಲ್ಲಾಗಲಿ ಕೇಳಿದರೆ ಅವರಿಗೆ ಏನೂ ಗೊತ್ತಿಲ್ಲ. ಆದುದರಿಂದ ಜನರು ಗೊಂದಲದಲ್ಲಿದ್ದಾರೆ ಅದನ್ನು ನಿವಾರಿಸಬೇಕು ಎಂದರು.

ಭಾರತ ದೇಶವು ಕಾನೂನು ಮತ್ತು ನಿಯಮಗಳಿಗಿಂತ ಹೆಚ್ಚಾಗಿ ಸಾಂಪ್ರದಾಯ ಹಾಗೂ ಸಂಸ್ಕೃತಿಯಲ್ಲಿ ನಡೆಯುತ್ತಿದ್ದು, ರಾತ್ರಿ ೧೦ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯ ತನಕ ಶಬ್ದ ಮಾಲಿನ್ಯ ಮಾಡದಂತೆ ಆದೇಶವನ್ನು ಹೊರಡಿಸಿದ್ದು, ನಮ್ಮ ಸಾಂಪ್ರದಾಯಗಳಾದ ಕೋಲ, ನಾಟಕ, ಉರೂಸ್ ಮೊದಲಾದವುಗಳನ್ನು ಮಾಡಬೇಡಿ ಎನ್ನುವುದಾದರೆ ನಮ್ಮ ಯುವಜನರಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಹೇಗೆ ತಿಳಿಸಿಕೊಡುವುದು. ಈ ನಿಯಮದಿಂದಾಗಿ ಭ್ರಷ್ಟಚಾರ ಹೆಚ್ಚಾಗುತ್ತದೆಯೇ ಹೊರತು ಬೇರೆನೂ ಪ್ರಯೋಜನವಿಲ್ಲ ಎಂದರು.

ನಾರಾಯಣಗುರು ವಿಚಾರವನ್ನು ಪಠ್ಯ ಪುಸ್ತಕದಿಂದ ತೆಗೆದು ಹಾಕಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪಠ್ಯ ಪುಸ್ತಕ ಮುದ್ರಣವಾಗುವ ಮೊದಲು ಪಿಡಿಎಫ್ ಫೈಲ್ ಅನ್ನು ಬಿಟ್ಟಿದ್ದು, ಅದನ್ನು ಈ ಯಾಕೆ ಡಿಲಿಟ್ ಮಾಡಿದ್ದಾರೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಬೇರೆ ಯಾರಾದರೂ ಬಂದು ಅಪ್‌ಲೋಡ್ ಮಾಡುತ್ತಾರಾ ಎಂದು ಯು.ಟಿ. ಖಾದರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು