2:01 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್ ಜಾರಿ: ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ

24/05/2022, 08:07

ಬೆಂಗಳೂರು(reporterkarnataka.com):ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಕಾರಣ ವಿಚಾರಣೆಗೆ ಹಾಜರಾಗುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಂದು(ಮೇ 24) ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.

ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಜನವರಿ ಹಾಗೂ ಫೆಬ್ರವರಿಯಲ್ಲಿ ಎರಡು ಹಂತದಲ್ಲಿ ತಲಾ ಐದು ದಿನ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದರು. ಈ ವೇಳೆ ಕೋವಿಡ್​ ನಿಯಮ ಉಲ್ಲಂಘಿಸಲಾಗಿದೆ ಎಂದು ಸಮನ್ಸ್​ ಜಾರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಸಮೀಪದ ಸಂಗಮ ಸ್ಥಳದಿಂದ ಆರಂಭವಾಗಿದ್ದ ಪಾದಯಾತ್ರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದಿತ್ತು.

ನ್ಯಾಯಾಲಯದ ಆಕ್ಷೇಪ ಹಾಗೂ ರಾಜ್ಯ ಸರ್ಕಾರದ ವಿರೋಧದ ಹಿನ್ನೆಲೆ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಎರಡು ಹಂತದಲ್ಲಿ ನಡೆಸಿದ್ದರು. ಪಾದಯಾತ್ರೆ ಸಂದರ್ಭ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು