12:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬೆಂಗಳೂರು ಮಳೆ ಅನಾಹುತ: 2 ದಿನಗಳಲ್ಲಿ 691 ಮಂದಿ ಸಂತ್ರಸ್ತರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ

24/05/2022, 08:13

ಬೆಂಗಳೂರು(reporterkarnataka.com): ಮಳೆಹಾನಿ ಸಂತ್ರಸ್ತರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, 2 ದಿನಗಳಲ್ಲಿ 691 ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿದ್ದಾರೆ. 

691 ಕುಟುಂಬಗಳಿಗೆ 1.73 ಕೋಟಿ ರೂಪಾಯಿಯನ್ನು ಸಂತ್ರಸ್ತರ ಖಾತೆಗೆ ವರ್ಗಾವಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ಥರ ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರದೊಳಗೆ ಪೂರ್ಣಗೊಳಿಸಿ ಬುಧವಾರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವಂತೆ ಕಾಲಮಿತಿ ನಿಗದಿಪಡಿಸಿದ್ದಾರೆ.

ಪೂರ್ವ ವಲಯದಲ್ಲಿ 7 ಕಡೆ ಡೀಸಿಲ್ಟಿಂಗ್ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಕ್ಷಣ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದು, 20 ದಿನಗಳೊಳಗೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀಲಸಂದ್ರ, ಸಂಜಯನಗರ ಸೇರಿದಂತೆ 22 ರೆಡ್ ಜೋನ್ ನಗಳಲ್ಲಿ ಸ್ಥಳಾಂತರಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು