1:14 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

28ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಮೆರವಣಿಗೆ: ಮಂಗಳೂರು ನಾಗರೀಕರು ಭಾಗವಹಿಸಲು ಕರೆ

24/05/2022, 22:07

ಮಂಗಳೂರು(reporterkarnataka.com): ಇದೇ ಮೇ 28ರ ಶನಿವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ಕರೆ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಆಹ್ವಾನ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮೂರು ಹಂತದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಮೇ 28ರಂದು ಮಂಗಳೂರು, ಉಳ್ಳಾಲ ಹಾಗೂ ಅಮರ ಸುಳ್ಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ, ಅಂದು ಮಂಗಳೂರು ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಗರದ ನಾಗರೀಕರು ಸಕ್ರಿಯವಾಗಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. 

ದೇಶಭಕ್ತಿ ಹಾಗೂ ದೇಶ ಪ್ರೇಮದ ಜಾಗೃತಿ ಮೂಡಿಸುವ ಮೆರವಣಿಗೆ ಅಂದು ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಗುವುದು, ಈ ಮೆರವಣಿಗೆಯಲ್ಲಿ ನಾಗರಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. 2ರಿಂದ 3  ಸಾವಿರ ಜನರು ಸೇರುವ ನಿರೀಕ್ಷೆಯಿದ್ದು, ಹತ್ತು ಹಲವು ಕಲಾತಂಡಗಳು, ಕಾಲೇಜು ವಿದ್ಯಾರ್ಥಿಗಳು, ಮಂಗಳೂರಿನ ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ, ಪುರಭವನದಲ್ಲಿ ಸಭಾ ಕಾರ್ಯಕ್ರಮ, ಉಪನ್ಯಾಸ, ಸ್ವಾತಂತ್ರ್ಯ ಹೋರಾಟದ ಸಾಕ್ಷ್ಯಚಿತ್ರ ಮತ್ತು ಶಿಲಾಫಲಕ ಅನಾವರಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು. 

ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ವೇದಿಕೆಯಲ್ಲಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರ ನೀಡಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ,ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿ.ಸೋಜ, ನ್ನಡ ಸಾಹಿತ್ಯ ಪರಿಷತ್ತು, ನಾಟಕ, ಸಂಗೀತ, ಯಕ್ಷಗಾನ ಹಾಗೂ ಬೇರೆ ಬೇರೆ ಕ್ಷೇತ್ರದ ಅಧ್ಯಕ್ಷರು, ರೈತ ಸಂಘದ ಅಧ್ಯಕ್ಷರು, ಮಹಿಳಾ ಒಕ್ಕೂಟಗಳು, ಚೇಂಬರ್ ಆಫ್ ಕಾಮರ್ಸ್ ಹಾಗೂ ತುಳು ಚಿತ್ರರಂಗ ಒಕ್ಕೂಟಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು