10:46 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

28ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಮೆರವಣಿಗೆ: ಮಂಗಳೂರು ನಾಗರೀಕರು ಭಾಗವಹಿಸಲು ಕರೆ

24/05/2022, 22:07

ಮಂಗಳೂರು(reporterkarnataka.com): ಇದೇ ಮೇ 28ರ ಶನಿವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ಕರೆ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಆಹ್ವಾನ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮೂರು ಹಂತದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಮೇ 28ರಂದು ಮಂಗಳೂರು, ಉಳ್ಳಾಲ ಹಾಗೂ ಅಮರ ಸುಳ್ಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ, ಅಂದು ಮಂಗಳೂರು ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಗರದ ನಾಗರೀಕರು ಸಕ್ರಿಯವಾಗಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. 

ದೇಶಭಕ್ತಿ ಹಾಗೂ ದೇಶ ಪ್ರೇಮದ ಜಾಗೃತಿ ಮೂಡಿಸುವ ಮೆರವಣಿಗೆ ಅಂದು ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಗುವುದು, ಈ ಮೆರವಣಿಗೆಯಲ್ಲಿ ನಾಗರಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. 2ರಿಂದ 3  ಸಾವಿರ ಜನರು ಸೇರುವ ನಿರೀಕ್ಷೆಯಿದ್ದು, ಹತ್ತು ಹಲವು ಕಲಾತಂಡಗಳು, ಕಾಲೇಜು ವಿದ್ಯಾರ್ಥಿಗಳು, ಮಂಗಳೂರಿನ ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ, ಪುರಭವನದಲ್ಲಿ ಸಭಾ ಕಾರ್ಯಕ್ರಮ, ಉಪನ್ಯಾಸ, ಸ್ವಾತಂತ್ರ್ಯ ಹೋರಾಟದ ಸಾಕ್ಷ್ಯಚಿತ್ರ ಮತ್ತು ಶಿಲಾಫಲಕ ಅನಾವರಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು. 

ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ವೇದಿಕೆಯಲ್ಲಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರ ನೀಡಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ,ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿ.ಸೋಜ, ನ್ನಡ ಸಾಹಿತ್ಯ ಪರಿಷತ್ತು, ನಾಟಕ, ಸಂಗೀತ, ಯಕ್ಷಗಾನ ಹಾಗೂ ಬೇರೆ ಬೇರೆ ಕ್ಷೇತ್ರದ ಅಧ್ಯಕ್ಷರು, ರೈತ ಸಂಘದ ಅಧ್ಯಕ್ಷರು, ಮಹಿಳಾ ಒಕ್ಕೂಟಗಳು, ಚೇಂಬರ್ ಆಫ್ ಕಾಮರ್ಸ್ ಹಾಗೂ ತುಳು ಚಿತ್ರರಂಗ ಒಕ್ಕೂಟಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು