5:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

27ರಿಂದ 29ರ ವರೆಗೆ ಪಣಂಬೂರು ಬೀಚ್ ನಲ್ಲಿ ಸರ್ಫಿಂಗ್: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ

24/05/2022, 22:31

ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಇದೇ ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ಸರ್ಫಿಂಗ್ ಕ್ರೀಡೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನ್ಯಾಷನಲ್  ಸರ್ಫಿಂಗ್ ಫೆಸ್ಟಿವಲ್ 2022 ಕುರಿಂತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಅಪಾಯಗಳು, ಅವಘಡಗಳು ಸಂಭವಿಸದಂತೆ ಕಟ್ಟುನಿಟ್ಟಿನ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಸಮುದ್ರದ ಅಲೆಗಳ ಮೇಲೆ ಆಡುವ ಸರ್ಫಿಂಗ್ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ, ಆದಕಾರಣ ಲೈಫ್ ಗಾರ್ಡ್ ಗಳು,ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದರು.

ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳು ಅವಘಡಗಳು ಆಗದಂತೆ ಎಚ್ಚರ ವಹಿಸಬೇಕು.

ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು, ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾದ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು, ಮುಖ್ಯವಾಗಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್  ಫೆಡರೇಷನ್  ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ,  ಎನ್ ಎಂ ಪಿ ಟಿಯ ಸಿವಿಲ್  ಇಂಜಿನಿಯರ್ ಶಶಿಧರ್ ಸೇರಿದಂತೆ ಸಂಬಂಧಿಸಿದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು