3:02 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಭಿನ್ನಮತ ಉಪಶಮನಕ್ಕೆ ಹೊರತು ಮುಖ್ಯಮಂತ್ರಿ ಬದಲಾವಣೆಗೆ ಅಲ್ಲ!

16/06/2021, 18:45

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆ ಕುರಿತು ಚರ್ಚಿಸಲಿದ್ದಾರೆ.

ಮಧ್ಯಾಹ್ನ 3.45ರ ವೇಳೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಕುಮಾರಕೃಪಾ ಗೆಸ್ಟ್ ಹೌಸ್ ಗೆ ತೆರಳಿದ್ದಾರೆ. ನಂತರ ಪಕ್ಷದ ವಿವಿಧ ನಾಯಕರು ಹಾಗೂ ಶಾಸಕರುಗಳ ಜತೆ ಸಭೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ಅರುಣ್ ಸಿಂಗ್ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ. ಅರುಣ್ ಸಿಂಗ್ ಅವರು ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಉಪಶಮನಗೊಳಿಸಲು ವಿವಿಧ ನಾಯಕರ ಜತೆ ಸಭೆ ನಡೆಸಲಿದ್ದಾರೆ ಹೊರತು ರಾಜ್ಯದ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ನಡೆಸುವುದಿಲ್ಲ ಎಂದು ಪಕ್ಷದ ವಿಶ್ವಸನೀಯ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು