8:49 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಭೀಕರ ನರಮೇಧ: 18 ವಿದ್ಯಾರ್ಥಿ ಸೇರಿ 21 ಮಂದಿಯ  ಗುಂಡಿಕ್ಕಿ ಹತ್ಯೆ

25/05/2022, 20:18

ಟೆಕ್ಸಾಸ್(reporterkarnataka.com) ಬಂದೂಕುಧಾರಿ 18ರ ಹರೆಯದ ತರುಣನೊಬ್ಬ ಇಲ್ಲಿನ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿ ಯದ್ವಾತದ್ವಾ ಗುಂಡಿನ ದಾಳಿ

ನಡೆಸಿದ ಪರಿಣಾಮ 18 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ.

ಈ ಹತ್ಯಾಕಾಂಡ ನಡೆಸಿದ ತರುಣನನ್ನು ಸಾಲ್ವಡಾರ್ ರಾಮೋಸ್ ಎಂದು ಗುರುತಿಸಲಾಗಿದ್ದು, ನಂತರ ಪೊಲೀಸರು ಆತನನ್ನು ಗುಂಡಿಟ್ಟು ಸಾಯಿಸಿದ್ದಾರೆ.

ಟೆಕ್ಸಾಸ್‌ನ ರಾಬ್ ಪ್ರಾಥಮಿಕ ಶಾಲೆಯಲ್ಲಿ ಈ ರಕ್ತಪಾತ ನಡೆದಿದೆ.18 ಮಕ್ಕಳು ಮತ್ತು 3 ವಯಸ್ಕರನ್ನು ಸಾಲ್ವಾಡಾರ್‌ ರಾಮೋಸ್‌ ಬಂದೂಕಿನಲ್ಲಿ ಹೊಸಕಿ ಹಾಕಿದ್ದಾನೆ. ರಾಬ್  ಸ್ಕೂಲ್ ನಲ್ಲಿ 600 ರಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಗುಂಡಿನ ದಾಳಿಗೆ ಬಲಿಯಾಗಿರುವ ಮಕ್ಕಳ ವಯಸ್ಸು ಎಷ್ಟು ಅನ್ನೋದು ತಿಳಿದು ಬಂದಿಲ್ಲ. ಒಂದು ವಾರ ಕಳೆದಿದ್ದರೆ ಮಕ್ಕಳಿಗೆ ಬೇಸಿಗೆ ರಜೆಯನ್ನು ನೀಡಲಾಗುತ್ತಿತ್ತು. ಆದರೆ ಅದೃಷ್ಟವಶಾತ್‌ ದುರಂತರ ಸಂಭವಿಸಿದೆ.

ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ವಿಷಾದ ವ್ಯಕ್ತಪಡಿಸಿದ್ದಾರೆ. ಟೆಕ್ಸಾಸ್‌ನಲ್ಲಿ ಮೃತರ ಗೌರವಾರ್ಥ ಸೂರ್ಯಾಸ್ತದ ಮೂಲಕ ಅಮೆರಿಕದ ಧ್ವಜಗಳನ್ನು ಅರ್ಧ ಹಾರಿಸುವ ಮೂಲಕ ಶೋಕಾಚರಣೆ ಆಚರಿಸುವಂತೆ ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು