12:05 AM Thursday9 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಭೀಕರ ನರಮೇಧ: 18 ವಿದ್ಯಾರ್ಥಿ ಸೇರಿ 21 ಮಂದಿಯ  ಗುಂಡಿಕ್ಕಿ ಹತ್ಯೆ

25/05/2022, 20:18

ಟೆಕ್ಸಾಸ್(reporterkarnataka.com) ಬಂದೂಕುಧಾರಿ 18ರ ಹರೆಯದ ತರುಣನೊಬ್ಬ ಇಲ್ಲಿನ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿ ಯದ್ವಾತದ್ವಾ ಗುಂಡಿನ ದಾಳಿ

ನಡೆಸಿದ ಪರಿಣಾಮ 18 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ.

ಈ ಹತ್ಯಾಕಾಂಡ ನಡೆಸಿದ ತರುಣನನ್ನು ಸಾಲ್ವಡಾರ್ ರಾಮೋಸ್ ಎಂದು ಗುರುತಿಸಲಾಗಿದ್ದು, ನಂತರ ಪೊಲೀಸರು ಆತನನ್ನು ಗುಂಡಿಟ್ಟು ಸಾಯಿಸಿದ್ದಾರೆ.

ಟೆಕ್ಸಾಸ್‌ನ ರಾಬ್ ಪ್ರಾಥಮಿಕ ಶಾಲೆಯಲ್ಲಿ ಈ ರಕ್ತಪಾತ ನಡೆದಿದೆ.18 ಮಕ್ಕಳು ಮತ್ತು 3 ವಯಸ್ಕರನ್ನು ಸಾಲ್ವಾಡಾರ್‌ ರಾಮೋಸ್‌ ಬಂದೂಕಿನಲ್ಲಿ ಹೊಸಕಿ ಹಾಕಿದ್ದಾನೆ. ರಾಬ್  ಸ್ಕೂಲ್ ನಲ್ಲಿ 600 ರಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಗುಂಡಿನ ದಾಳಿಗೆ ಬಲಿಯಾಗಿರುವ ಮಕ್ಕಳ ವಯಸ್ಸು ಎಷ್ಟು ಅನ್ನೋದು ತಿಳಿದು ಬಂದಿಲ್ಲ. ಒಂದು ವಾರ ಕಳೆದಿದ್ದರೆ ಮಕ್ಕಳಿಗೆ ಬೇಸಿಗೆ ರಜೆಯನ್ನು ನೀಡಲಾಗುತ್ತಿತ್ತು. ಆದರೆ ಅದೃಷ್ಟವಶಾತ್‌ ದುರಂತರ ಸಂಭವಿಸಿದೆ.

ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ವಿಷಾದ ವ್ಯಕ್ತಪಡಿಸಿದ್ದಾರೆ. ಟೆಕ್ಸಾಸ್‌ನಲ್ಲಿ ಮೃತರ ಗೌರವಾರ್ಥ ಸೂರ್ಯಾಸ್ತದ ಮೂಲಕ ಅಮೆರಿಕದ ಧ್ವಜಗಳನ್ನು ಅರ್ಧ ಹಾರಿಸುವ ಮೂಲಕ ಶೋಕಾಚರಣೆ ಆಚರಿಸುವಂತೆ ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು