7:20 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು