10:03 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು