11:33 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ

25/05/2022, 21:55

ಮಂಗಳೂರು(reporterkarnataka.com) :  ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ
ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್. ಎಫ್. ರಸ್ಕಿನ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.

ಶಶಿರಾಜ್ ರಾವ್ ಕಾವೂರು ಅವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ ಆಸಕ್ತಿಯಲ್ಲಿ ನಾಟಕಕಾರರಾಗಿ, ಪುಸ್ತಕ ಬರಹಗಾರರಾಗಿ ಪರಿಚಿತರು. ನಾಟಕಕಾರರಾಗಿ, ನಾಟಕ ಬರಹಗಾರರಾಗಿ, ನಿರ್ದೇಶಕರಾಗಿ ಅಲ್ಲೂ ಸೈ ಎನಿಸಿಕೊಂಡವರು. ಹಲವು ನಾಟಕಗಳಿಗೆ ಗೀತ ರಚನೆಕಾರರಾಗಿ ದುಡಿದ ಅನುಭವ ಶಶಿರಾಜ್ ಕಾವೂರು ಅವರಿಗಿದೆ.

ಕೃತಿ ಲೋಕಾರ್ಪಣೆ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಸಚಿವ ಡಾ. ಆಲ್ವಿನ್ ಡೇಸಾ ವಹಿಸಿದ್ದರು. ತುಳು -ಕನ್ನಡ ವಿದ್ವಾಂಸ ಡಾ. ಬಿ. ಎ. ವಿವೇಕ ರೈ 
ಅವರು “ಪುದ್ದು ಕೊಡ್ತರ್ “ಕೃತಿ ಲೋಕಾರ್ಪಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ. ದಾಮೋದರ ಶೆಟ್ಟಿ, ಉದ್ಯಮಿಗಳು ಹಾಗೂ ಚಲನಚಿತ್ರ ನಿರ್ಮಾಪಕ ದೇವದಾಸ್ ಪಾಂಡೇಶ್ವರ್, ಕರ್ನಾಟಕ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್,  ಕೊರಗ ಅಭಿವೃದ್ಧಿ ಸಂಘ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಂಚಕಲ್ ಆಗಮಿಸಿದ್ದರು. 


ಕಾರ್ಯಕ್ರಮವನ್ನು ಡಾ. ಮಹಾಲಿಂಗ ಭಟ್ (ಮುಖ್ಯಸ್ಥರು ಕನ್ನಡ ವಿಭಾಗ, ಸಂತ ಅಲೋಶಿಯಸ್ ಕಾಲೇಜು) ಪ್ರೊ. ಕೃಷ್ಣಮೂರ್ತಿ. (ಅಧ್ಯಕ್ಷರು ವಿಕಾಸ, ಸಂತ ಅಲೋಶಿಯಸ್ ಕಾಲೇಜು ಮಂಗಳೂರು), ಗೋಪಾಲಕೃಷ್ಣ ಶೆಟ್ಟಿ (ಅಧ್ಯಕ್ಷರು ರಂಗ ಸಂಗಾತಿ ಮಂಗಳೂರು) ಅವರು ನಡೆಸಿಕೊಟ್ಟರು.  ಕಾರ್ಯಕ್ರಮದಲ್ಲಿ ಕೊರಲ್ ಕಲಾ ತಂಡದಿಂದ ಡೋಲು ಪ್ರಾಕ್ಷಿಕತೆ ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು