10:56 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಚಿಂತೆ ಬಿಟ್ಟು ಮನೆ ಕಟ್ಟಿ; ದ.ಕ.ಜಿಲ್ಲೆಯಲ್ಲಿ ಭರಪೂರ ಮರಳು ಲಭ್ಯವಂತೆ: ಹೀಗೆಂತ ಸ್ವತಃ ಜಿಲ್ಲಾಧಿಕಾರಿಗಳೇ ಹೇಳುತ್ತಾರೆ

26/05/2022, 14:40

ಮಂಗಳೂರು(reporterkarnataka.com): ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮರಳಿನ ದರದಲ್ಲಿ ಏರಿಕೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಅದು ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯಲ್ಲಿ ಭರಪೂರ ಮರಳು ಸಂಗ್ರಹವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ಪಷ್ಟಪಡಿಸಿದರು. 

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತದೆ. ಸಿಹಿನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ. ಮರಳು ಮಿತ್ರ ಆ್ಯಪ್‍ನಲ್ಲಿ ಅರ್ಜಿ ಸಲ್ಲಿಸಿ 7,000 ರೂ.ಗಳಿಗೆ 10 ಮೆಟ್ರಿಕ್ ಟನ್ ಮರಳು ಪಡೆಯಬಹುದು. ಜಿಎಸ್‍ಟಿ ಮತ್ತು ಸಾಗಾಟ ವೆಚ್ಚದೊಂದಿಗೆ ನಿರ್ಮಾಣ ಕಾಮಗಾರಿಗೆ ಅಗತ್ಯ ಮರಳನ್ನು ಖರೀದಿಸಬಹುದು ಎಂದು ತಿಳಿಸಿದರು.


ಅದ್ಯಪಾಡಿ ಮತ್ತು ಶಂಭೂರು ಮರಳು ಸ್ಟಾಕ್ ಯಾರ್ಡ್ ನಲ್ಲಿ ಕ್ರಮವಾಗಿ 9,000 ಮತ್ತು 12,000 ಮೆಟ್ರಿಕ್ ಟನ್ ಲಭ್ಯವಿದೆ. ಸಂಗ್ರಹಿಸಿಡಲು ಜಾಗದ ಕೊರತೆ ಇದೆ. ಬೇಡಿಕೆಗೆ ತಕ್ಕಂತೆ ಮರಳು ಜಿಲ್ಲೆಯ ನಿರ್ಮಾಣ ಕಾಮಗಾರಿಗೆ ಲಭ್ಯವಾಗಲಿದೆ. ಹೊರ ಜಿಲ್ಲೆಯಿಂದಲೂ ಮರಳಿಗೆ ಬೇಡಿಕೆ ಇದ್ದರೂ ಅನುಮತಿ ನೀಡಲಾಗಿಲ್ಲ. ಸದ್ಯ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಮರಳು ಪೂರೈಕೆಗೆ ಕ್ರಮ ವಹಿಸಲಾಗುವುದು. ಹಾಗಾಗಿ ಯಾರೂ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು