1:37 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಿಂತೆ ಬಿಟ್ಟು ಮನೆ ಕಟ್ಟಿ; ದ.ಕ.ಜಿಲ್ಲೆಯಲ್ಲಿ ಭರಪೂರ ಮರಳು ಲಭ್ಯವಂತೆ: ಹೀಗೆಂತ ಸ್ವತಃ ಜಿಲ್ಲಾಧಿಕಾರಿಗಳೇ ಹೇಳುತ್ತಾರೆ

26/05/2022, 14:40

ಮಂಗಳೂರು(reporterkarnataka.com): ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮರಳಿನ ದರದಲ್ಲಿ ಏರಿಕೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಅದು ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯಲ್ಲಿ ಭರಪೂರ ಮರಳು ಸಂಗ್ರಹವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ಪಷ್ಟಪಡಿಸಿದರು. 

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತದೆ. ಸಿಹಿನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ. ಮರಳು ಮಿತ್ರ ಆ್ಯಪ್‍ನಲ್ಲಿ ಅರ್ಜಿ ಸಲ್ಲಿಸಿ 7,000 ರೂ.ಗಳಿಗೆ 10 ಮೆಟ್ರಿಕ್ ಟನ್ ಮರಳು ಪಡೆಯಬಹುದು. ಜಿಎಸ್‍ಟಿ ಮತ್ತು ಸಾಗಾಟ ವೆಚ್ಚದೊಂದಿಗೆ ನಿರ್ಮಾಣ ಕಾಮಗಾರಿಗೆ ಅಗತ್ಯ ಮರಳನ್ನು ಖರೀದಿಸಬಹುದು ಎಂದು ತಿಳಿಸಿದರು.


ಅದ್ಯಪಾಡಿ ಮತ್ತು ಶಂಭೂರು ಮರಳು ಸ್ಟಾಕ್ ಯಾರ್ಡ್ ನಲ್ಲಿ ಕ್ರಮವಾಗಿ 9,000 ಮತ್ತು 12,000 ಮೆಟ್ರಿಕ್ ಟನ್ ಲಭ್ಯವಿದೆ. ಸಂಗ್ರಹಿಸಿಡಲು ಜಾಗದ ಕೊರತೆ ಇದೆ. ಬೇಡಿಕೆಗೆ ತಕ್ಕಂತೆ ಮರಳು ಜಿಲ್ಲೆಯ ನಿರ್ಮಾಣ ಕಾಮಗಾರಿಗೆ ಲಭ್ಯವಾಗಲಿದೆ. ಹೊರ ಜಿಲ್ಲೆಯಿಂದಲೂ ಮರಳಿಗೆ ಬೇಡಿಕೆ ಇದ್ದರೂ ಅನುಮತಿ ನೀಡಲಾಗಿಲ್ಲ. ಸದ್ಯ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಮರಳು ಪೂರೈಕೆಗೆ ಕ್ರಮ ವಹಿಸಲಾಗುವುದು. ಹಾಗಾಗಿ ಯಾರೂ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು