12:25 AM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ‘ಅನುಷ ಅನುರಾಗದ ಮುಸ್ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ

26/05/2022, 23:28

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕವಿ ದಿವಂಗತ ಬಿ.ಎನ್. ಗೋಪಾಲಕೃಷ್ಣ ರಾವ್ ಅವರ ನೆನಪಿನಂಗಳದ “ಅನುಷ ಅನುರಾಗದ ಮುಸ್ಸಂಜೆ” ಸಾಂಸ್ಕೃತಿಕ ಕಾರ್ಯಕ್ರಮವು ಸುಬ್ರಮಣ್ಯ ಸಭಾ ಸಭಾಂಗಣದಲ್ಲಿ ನಡೆಯಿತು. 

ಕವಿ ಗೋಪಾಲಕೃಷ್ಣ ರಾವ್  ನೆನಪಿನ ಜೊತೆ,ರೂಪ ಲಕ್ಷ್ಮಿ ರಾವ್ ನಿರ್ಮಾಣದ, ಶರತ್ ಬಿಳಿನೆಲೆ ಸಂಗೀತ ನೀಡಿ ನಿರ್ದೇಶಿಸಿದ, ಕಿರುತೆರೆ, ಹಿರಿತೆರೆ ನಾಯಕಿ ತನ್ವಿ ರಾವ್ ಅಭಿನಯದ,ತನುಶ್ರೀ ಅವರ ಕಂಠಸಿರಿಯಿಂದ ಮೂಡಿಬಂದ “ಕವಿ” ದೃಶ್ಯಕಾವ್ಯ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜೊತೆಜೊತೆಗೆ ನಡೆದವು, ತನ್ನ ಅಪ್ರತಿಮ ಪ್ರತಿಭೆ ಮೂಲಕ ದೇಶದ ಗಮನ ಸೆಳೆದ, ರಾಷ್ಟ್ರಪತಿ ಮತ್ತು ಪ್ರಧಾನಿಗಳಿಂದ ಪ್ರಶಂಸಿಸಲ್ಪಟ್ಟ ತನ್ವಿ ರಾವ್ ಮತ್ತು ರಾಜ್ಯೋತ್ಸವ ಸಾಧಕಿ ಪ್ರಶಸ್ತಿ ಪುರಸ್ಕೃತ ತನುಶ್ರೀ  ಜೋಡಿ, ದೃಶ್ಯಕಾವ್ಯದ ಮೂಲಕ ಮತ್ತೊಮ್ಮೆ ಮನೆಮಾತಾಗಿದ್ದಾರೆ. ಅಲ್ಲದೆ ಯುವ ಸಂಗೀತ ನಿರ್ದೇಶಕ ಶರತ್ ಬಿಳಿನೆಲೆ ಯವರು ಉತ್ತಮ ಮತ್ತು ವಿಭಿನ್ನ ರೀತಿಯ ಪ್ರಯತ್ನದಲ್ಲಿ ಸಂಗೀತವನ್ನು ನೀಡಿ ಸಫಲರಾಗಿದ್ದಾರೆ.  ರೂಪಲಕ್ಷ್ಮಿ ತನ್ನ ಬಹುದಿನಗಳ ಕನಸಾದ “ಅನುಷಾ ಅನುರಾಗ ” ಯುಟ್ಯೂಬ್ ಚಾನೆಲ್ ಇತ್ತೀಚೆಗಷ್ಟೇ ಆರಂಭಿಸಿದ್ದು ಈ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ರತಿಮ ಸಾಧಕರನ್ನು ನಾಡಿಗೆ ಪರಿಚಯಿಸುವ ಪ್ರಯತ್ನವನ್ನು ಮಾಡುತ್ತಿರುವ ಬಗ್ಗೆ ಪ್ರಶಂಸೆ ವ್ಯಕ್ತವಾಯಿತು.

ಸಭಾ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಲನಚಿತ್ರ ನಿರ್ಮಾಪಕ-ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್,  ಸುಬ್ರಹ್ಮಣ್ಯ ಸಭಾದ ಅಧ್ಯಕ್ಷ, ಉದ್ಯಮಿ ಹರ್ಷಕುಮಾರ್ ಕ್ಯಾದಿಗೆ, ಸನಾತನ ನಾಟ್ಯಾಲಯದ ವಿದುಷಿ ಶಾರದಾ ಮಣಿ ಶೇಖರ್, ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ವೈದ್ಯಕೀಯ ಕ್ಷೇತ್ರದ ಸಾಧಕಿ  ವಾಣಿ ಸುಗುಣ ಕುಮಾರ್, ಇಂಡಿಯನ್ ಮಿಲಿಟರಿ ಹವಾಲ್ದಾರ್ ನವೀನ್, 

ದೀಕ್ಷಾ ಅಮೀನ್, ಜೂನಿಯರ್ ರಾಜ್ ಕುಮಾರ್  ಬಿರುದಾಂಕಿತ ಜಗದೀಶ್ ಶಿವಪುರ, ಶಶಿ ಗಿರಿವನ, ಇವರುಗಳನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದ ಪ್ರಸ್ತಾವನೆ- ನಿರೂಪಣೆ, ನಿರ್ದೇಶನ ಹಾಗೂ ವಂದನಾರ್ಪಣೆಯನ್ನು ದೃಶ್ಯ ಮಾಧ್ಯಮ ನಿರೂಪಕ ಚೇತನ್ ಶೆಟ್ಟಿ ನಡೆಸಿಕೊಟ್ಟರು. ಒಟ್ಟಾರೆಯಾಗಿ ಉತ್ತಮ, ನೂತನ ವಿಭಿನ್ನ ಕಾರ್ಯಕ್ರಮ ಜನರ ಮನಸ್ಸನ್ನು ಸೆಳೆಯುವುದರ ಜೊತೆಗೆ ಮಾದರಿ ಕಾರ್ಯಕ್ರಮ ಎನಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು