12:10 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ

17/06/2021, 07:40

ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ,

ನಾಗಮಂಗಲ ಸುಧಾಮೂರ್ತಿ ಮತ್ತು ಜನನಿ ಸಂಸ್ಥೆ ಹಾಗೂ ವಿಶ್ವ ಜಾನಿ ಸೇವಾ ಸಂಸ್ಥೆ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಪ್ರತಿಯೊಬ್ಬರಿಗೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊಂದು ದಿನ ಗಂಡಾಂತರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ನುಡಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಎಪಿಎಂಸಿ ಅಧ್ಯಕ್ಷ ರಮೇಶ್, ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು