6:35 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ

17/06/2021, 07:40

ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ,

ನಾಗಮಂಗಲ ಸುಧಾಮೂರ್ತಿ ಮತ್ತು ಜನನಿ ಸಂಸ್ಥೆ ಹಾಗೂ ವಿಶ್ವ ಜಾನಿ ಸೇವಾ ಸಂಸ್ಥೆ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಪ್ರತಿಯೊಬ್ಬರಿಗೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊಂದು ದಿನ ಗಂಡಾಂತರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ನುಡಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಎಪಿಎಂಸಿ ಅಧ್ಯಕ್ಷ ರಮೇಶ್, ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು