5:25 PM Friday1 - May 2026
ಬ್ರೇಕಿಂಗ್ ನ್ಯೂಸ್
Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ

ಇತ್ತೀಚಿನ ಸುದ್ದಿ

ಮೋದಿ ಸರಕಾರಕ್ಕೆ 8ನೇ ವರ್ಷಾಚರಣೆ:  ಮೇ 30ರಿಂದ ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್‌ ಪ್ರಚಾರಾಂದೋಲನ

29/05/2022, 12:17

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್‌ 14ರ ವರೆಗೆ ದೇಶದಾದ್ಯಂತ ಬೃಹತ್‌ ಪ್ರಚಾರಾಂದೋಲನ ಹಮ್ಮಿಕೊಂಡಿದೆ.

ಈ ಕುರಿತು  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್, ಈ ಕಾರ್ಯಕ್ರಮದಲ್ಲಿ ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು ಎಂದರು.

ಮೇ 30ರಂದು ಕೋವಿಡ್‌ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಪರಿಹಾರ ಧನದ ಚೆಕ್‌ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು ಎಂದು ತಿಳಿಸಿದರು.

‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್‌ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು