4:40 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಟ್ರಕ್ -ಟೆಂಪೋ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ ನ 7 ಮಂದಿ ದಾರುಣ ಸಾವು

29/05/2022, 22:21

ಬೀದರ್(reporterkarnataka.com): 
ಉತ್ತರ ಪ್ರದೇಶದ ಬಹ್ರೆöಪುಚ್-ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರನ್ನು ಬೀದರ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ.

ಟ್ರಕ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದು ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಯಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿವಕುಮಾರ ಪೂಜಾರಿ (29), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಟೆಂಪೋ ಟ್ರಾವೆಲರ್ ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿತ್ತು ಎನ್ನಲಾಗಿದೆ. ಬೀದರ್‌ನ ಗಾಂಧಿಗಂಜ್ ಪ್ರದೇಶದ 16ಮಂದಿ ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದರು. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು