7:51 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಟ್ರಕ್ -ಟೆಂಪೋ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ ನ 7 ಮಂದಿ ದಾರುಣ ಸಾವು

29/05/2022, 22:21

ಬೀದರ್(reporterkarnataka.com): 
ಉತ್ತರ ಪ್ರದೇಶದ ಬಹ್ರೆöಪುಚ್-ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರನ್ನು ಬೀದರ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ.

ಟ್ರಕ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದು ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಯಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿವಕುಮಾರ ಪೂಜಾರಿ (29), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಟೆಂಪೋ ಟ್ರಾವೆಲರ್ ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿತ್ತು ಎನ್ನಲಾಗಿದೆ. ಬೀದರ್‌ನ ಗಾಂಧಿಗಂಜ್ ಪ್ರದೇಶದ 16ಮಂದಿ ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದರು. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು