9:52 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ದೇಶವನ್ನು ಮಲೇರಿಯಾ ಮುಕ್ತ ಮಾಡಲು ಪ್ರತಿಯೊಬ್ಬ ಪ್ರಜೆಯೂ ಪಣ ತೊಡಬೇಕು:ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ  

17/06/2021, 09:30

ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಭಾರತವನ್ನು ೨೦೨೫ ಕ್ಕೆ ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿಸಲು ಪ್ರತಿಯೊಬ್ಬರು ಮುಂಜಾಗೃತ ಪಾಲನೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಹಕಾರ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ . ರಮ್ಯ ದೀಪಿಕಾ ಕರೆ ನೀಡಿದರು.

ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಲೇರಿಯಾ ವಿರೋಧ ಮಾಸಾಚರಣೆ -೨೦೨೧ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗೆ ಮುಂಜಾಗೃತ ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷ ಕೊರೊನಾ ಸೋಂಕು ಲಾಕ್ ಡೌನ್ ಸಂದರ್ಭದಲ್ಲಿ ಪತ್ರಕರ್ತರ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ . ಮಲೇರಿಯ ಎಂಬುವುದು ಬಹಳ ಹಳೆಯದಾದ ಸಾಂಕ್ರಮಿಕ ಕಾಯಿಲೆಯಾಗಿದೆ ಎಂದರು.

ಮಲೇರಿಯ ಮಾದರಿಯಲ್ಲಿ ಸೊಳ್ಳೆಗಳಿಂದ ಡೆಂಗ್ಯೂ , ಮೆದುಳು ಜ್ವರ , ಚಿಕೂನ್‌ಗುನ್ಯ , ಆನೆಕಾಲು ರೋಗ ಮುಂತಾದ ಖಾಯಿಲೆಗಳು ಬರಲಿದ್ದು , ಇವುಗಳನ್ನು ರಕ್ತ ಪರೀಕ್ಷೆಯಿಂದ ಗುರುತಿಸಬಹುದಾಗಿದೆ. ಈ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿಗಳು ಸಿಗಲಿದ್ದು , ಇದು ವಾಸಿ ಮಾಡಬಹುದಾದ ಖಾಯಿಲೆಯಾಗಿದೆ. ಪ್ರಾರಂಭದಲ್ಲಿ ಚಿಕಿತ್ಸೆ ಪಡೆಯುವುದರಿಂದ ಬೇಗನೆ ವಾಸಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು ಈ ಖಾಯಿಲೆಯು ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತಾಗಲು ಪ್ರತಿ ವರ್ಷ ಮಲೇರಿಯಾ ವಿರೋಧ ಮಾಸಾಚರಣೆಯನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು. 

ಜಿಲ್ಲಾ ಆರೋಗ್ಯ ಇಲಾಖೆಯ ಕೀಟಶಾಸ್ತ್ರ ತಜ್ಞ ವೇಣುಗೋಪಾಲ್ ಮಾತನಾಡಿ, ಮಲೇರಿಯಾ ರೋಗವು ಸಾಮಾನ್ಯವಾಗಿ ಹೆಚ್ಚಾಗಿ ಮುಂಗಾರು ಮಳೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಮಲೇರಿಯಾ ರೋಗವು ಪ್ಲಾಸ್ಕೋಡಿಯ ಎಂಬ ರೋಗಾಣು ಹೊಂದಿದೆ ಎಂದರು.

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಮುನಿರಾಜು ಮಾತನಾಡಿ , ಸಾಮಾನ್ಯವಾಗಿ ಹಸಿರು ಇರುವ ಕಡೆ ಸೊಳ್ಳೆಗಳು ಇರುವುದು ಸಾಮಾನ್ಯವಾಗಿದೆ . ಪ್ರಸ್ತುತ ಕೊರೊನಾ ಬಹಳ ಅಪಾಯಕಾರಿಯಾಗಿದ್ದು , ಇದರ ಬಗ್ಗೆ ಬಹಳಷ್ಟು ಎಚ್ಚರಿಕೆ ಇರುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಬಿ.ವಿ.ಗೋಪಿನಾಥ್ ಮಾತನಾಡಿ , ಪ್ರಸ್ತುತ ಕೋವಿಡ್ ಎದುರಿಸಿದವರಿಗೆ ಮಲೇರಿಯಾ ಯಾವ ಲೆಕ್ಕ ಎಂಬ ಭಾವನೆ ಬೇಡ. ಮಲೇರಿಯಾ ಬಗ್ಗೆ ಮುಂಜಾಗೃತೆಗಳ ಎಚ್ಚರಿಕೆ ಅಗತ್ಯ ಎಂದರು. 

ಆರೋಗ್ಯಾಧಿಕಾರಿ ಸತ್ಯನಾರಾಯಣ ಗೌಡ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು