11:23 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ದೇಶವನ್ನು ಮಲೇರಿಯಾ ಮುಕ್ತ ಮಾಡಲು ಪ್ರತಿಯೊಬ್ಬ ಪ್ರಜೆಯೂ ಪಣ ತೊಡಬೇಕು:ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ  

17/06/2021, 09:30

ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com 

ಭಾರತವನ್ನು ೨೦೨೫ ಕ್ಕೆ ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿಸಲು ಪ್ರತಿಯೊಬ್ಬರು ಮುಂಜಾಗೃತ ಪಾಲನೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಹಕಾರ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ . ರಮ್ಯ ದೀಪಿಕಾ ಕರೆ ನೀಡಿದರು.

ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಲೇರಿಯಾ ವಿರೋಧ ಮಾಸಾಚರಣೆ -೨೦೨೧ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗೆ ಮುಂಜಾಗೃತ ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷ ಕೊರೊನಾ ಸೋಂಕು ಲಾಕ್ ಡೌನ್ ಸಂದರ್ಭದಲ್ಲಿ ಪತ್ರಕರ್ತರ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ . ಮಲೇರಿಯ ಎಂಬುವುದು ಬಹಳ ಹಳೆಯದಾದ ಸಾಂಕ್ರಮಿಕ ಕಾಯಿಲೆಯಾಗಿದೆ ಎಂದರು.

ಮಲೇರಿಯ ಮಾದರಿಯಲ್ಲಿ ಸೊಳ್ಳೆಗಳಿಂದ ಡೆಂಗ್ಯೂ , ಮೆದುಳು ಜ್ವರ , ಚಿಕೂನ್‌ಗುನ್ಯ , ಆನೆಕಾಲು ರೋಗ ಮುಂತಾದ ಖಾಯಿಲೆಗಳು ಬರಲಿದ್ದು , ಇವುಗಳನ್ನು ರಕ್ತ ಪರೀಕ್ಷೆಯಿಂದ ಗುರುತಿಸಬಹುದಾಗಿದೆ. ಈ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿಗಳು ಸಿಗಲಿದ್ದು , ಇದು ವಾಸಿ ಮಾಡಬಹುದಾದ ಖಾಯಿಲೆಯಾಗಿದೆ. ಪ್ರಾರಂಭದಲ್ಲಿ ಚಿಕಿತ್ಸೆ ಪಡೆಯುವುದರಿಂದ ಬೇಗನೆ ವಾಸಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು ಈ ಖಾಯಿಲೆಯು ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತಾಗಲು ಪ್ರತಿ ವರ್ಷ ಮಲೇರಿಯಾ ವಿರೋಧ ಮಾಸಾಚರಣೆಯನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು. 

ಜಿಲ್ಲಾ ಆರೋಗ್ಯ ಇಲಾಖೆಯ ಕೀಟಶಾಸ್ತ್ರ ತಜ್ಞ ವೇಣುಗೋಪಾಲ್ ಮಾತನಾಡಿ, ಮಲೇರಿಯಾ ರೋಗವು ಸಾಮಾನ್ಯವಾಗಿ ಹೆಚ್ಚಾಗಿ ಮುಂಗಾರು ಮಳೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಮಲೇರಿಯಾ ರೋಗವು ಪ್ಲಾಸ್ಕೋಡಿಯ ಎಂಬ ರೋಗಾಣು ಹೊಂದಿದೆ ಎಂದರು.

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಮುನಿರಾಜು ಮಾತನಾಡಿ , ಸಾಮಾನ್ಯವಾಗಿ ಹಸಿರು ಇರುವ ಕಡೆ ಸೊಳ್ಳೆಗಳು ಇರುವುದು ಸಾಮಾನ್ಯವಾಗಿದೆ . ಪ್ರಸ್ತುತ ಕೊರೊನಾ ಬಹಳ ಅಪಾಯಕಾರಿಯಾಗಿದ್ದು , ಇದರ ಬಗ್ಗೆ ಬಹಳಷ್ಟು ಎಚ್ಚರಿಕೆ ಇರುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಬಿ.ವಿ.ಗೋಪಿನಾಥ್ ಮಾತನಾಡಿ , ಪ್ರಸ್ತುತ ಕೋವಿಡ್ ಎದುರಿಸಿದವರಿಗೆ ಮಲೇರಿಯಾ ಯಾವ ಲೆಕ್ಕ ಎಂಬ ಭಾವನೆ ಬೇಡ. ಮಲೇರಿಯಾ ಬಗ್ಗೆ ಮುಂಜಾಗೃತೆಗಳ ಎಚ್ಚರಿಕೆ ಅಗತ್ಯ ಎಂದರು. 

ಆರೋಗ್ಯಾಧಿಕಾರಿ ಸತ್ಯನಾರಾಯಣ ಗೌಡ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು