9:04 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು