4:53 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು