6:19 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು