3:33 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ?

17/06/2021, 13:20

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.

ಎಲ್ಲರ ಖಾತೆಗಳಲ್ಲೂ ಮುಖ್ಯಮಂತ್ರಿ ಪುತ್ರ ಕೈಯಾಡಿಸುತ್ತಿದ್ದಾರೆ ಎಂಬ ಆರೋಪ ಹಲವು ಸಮಯದಿಂದ ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದನ್ನು

ಗಂಭೀರವಾಗಿ ಪರಿಗಣಿಸುತ್ತಾರೆಯೇ ಎಂಬ ಪ್ರಶ್ನೆ ಭಿನ್ನಮತೀಯ ಶಾಸಕರಲ್ಲಿ ಕಾಡಲಾರಂಭಿಸಿದೆ.

ಇದರೊಂದಿಗೆ ಪಕ್ಷ ಮತ್ತು ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ ಎನ್ನಲಾಗಿದೆ. ಸಂಪುಟದಲ್ಲಿರುವ ಕೆಲವು ಹಳೆಯ ಮುಖಗಳಿಗೆ ಕೋಕ್ ಕೊಟ್ಟು ಹೊಸಬರನ್ನು ಸೇರಿಸುವುದು ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇದರಲ್ಲಿ ಸೇರಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಇಲ್ಲ ಎಂದು ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸಂಜೆ ದಿಲ್ಲಿಗೆ ಹೋದ ಮೇಲೆ ರಾಜ್ಯ ಬಿಜೆಪಿಗೆ ಹೈಕಮಾಂಡ್ ನಿಂದ ಸೂಚನೆಗಳು ರವಾನೆಯಾಗುವ ಸಾಧ್ಯತೆಗಳಿವೆ. ಅದರಲ್ಲಿ ಮುಖ್ಯಮಂತ್ರಿ ಪರ ಬಣ ಹಾಗೂ ವಿರೋಧಿ ಬಣಕ್ಕೂ ಬಿಸಿ ಮುಟ್ಟಿಸುವ ಅಂಶಗಳು ಮ ಇರುತ್ತವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು