12:18 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ?

17/06/2021, 13:20

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.

ಎಲ್ಲರ ಖಾತೆಗಳಲ್ಲೂ ಮುಖ್ಯಮಂತ್ರಿ ಪುತ್ರ ಕೈಯಾಡಿಸುತ್ತಿದ್ದಾರೆ ಎಂಬ ಆರೋಪ ಹಲವು ಸಮಯದಿಂದ ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದನ್ನು

ಗಂಭೀರವಾಗಿ ಪರಿಗಣಿಸುತ್ತಾರೆಯೇ ಎಂಬ ಪ್ರಶ್ನೆ ಭಿನ್ನಮತೀಯ ಶಾಸಕರಲ್ಲಿ ಕಾಡಲಾರಂಭಿಸಿದೆ.

ಇದರೊಂದಿಗೆ ಪಕ್ಷ ಮತ್ತು ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ ಎನ್ನಲಾಗಿದೆ. ಸಂಪುಟದಲ್ಲಿರುವ ಕೆಲವು ಹಳೆಯ ಮುಖಗಳಿಗೆ ಕೋಕ್ ಕೊಟ್ಟು ಹೊಸಬರನ್ನು ಸೇರಿಸುವುದು ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇದರಲ್ಲಿ ಸೇರಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಇಲ್ಲ ಎಂದು ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸಂಜೆ ದಿಲ್ಲಿಗೆ ಹೋದ ಮೇಲೆ ರಾಜ್ಯ ಬಿಜೆಪಿಗೆ ಹೈಕಮಾಂಡ್ ನಿಂದ ಸೂಚನೆಗಳು ರವಾನೆಯಾಗುವ ಸಾಧ್ಯತೆಗಳಿವೆ. ಅದರಲ್ಲಿ ಮುಖ್ಯಮಂತ್ರಿ ಪರ ಬಣ ಹಾಗೂ ವಿರೋಧಿ ಬಣಕ್ಕೂ ಬಿಸಿ ಮುಟ್ಟಿಸುವ ಅಂಶಗಳು ಮ ಇರುತ್ತವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು