11:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ: ಮೇ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಾನ್ವಿ ದೇವಿಪ್ರಸಾದ್ ಹಾಗೂ ಶ್ರವಣ್ ಕಡಬ ಆಯ್ಕೆ

31/05/2022, 21:03

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಾನ್ವಿ ದೇವಿಪ್ರಸಾದ್ ಹಾಗೂ ಶ್ರವಣ್ ಕಡಬ ಆಯ್ಕೆಗೊಂಡಿದ್ದಾರೆ.

ಕಾವೂರು ಗಾಂಧಿನಗರದ ದೇವಿಪ್ರಸಾದ್ ಮತ್ತು  ಚಿತ್ರಾಕ್ಷಿ ಅವರ ಪುತ್ರಿಯಾದ ಸಾನ್ವಿ ದೇವಿಪ್ರಸಾದ್ 2015, ಮೇ 17ರಂದು

ಮಂಗಳೂರಿನಲ್ಲಿ ಜನಿಸಿದರು. ಸಾನ್ವಿ ಇದೀಗ ಮಂಗಳೂರಿನ ಶ್ರೀ ಶ್ರೀ ರವಿ ಶಂಕರ ವಿದ್ಯಾಮಂದಿರದಲ್ಲಿ 2ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ಸಂಗೀತ, ನೃತ್ಯ, ಕೀಬೋರ್ಡ್ , ಯಕ್ಷಗಾನ ಈಕೆಯ ಹವ್ಯಾಸ.


ಯಕ್ಷಗುರು ರಾಕೇಶ್ ರೈ ಅಡ್ಕ ಅವರ ಬಳಿ ಯಕ್ಷಗಾನ ನಾಟ್ಯ ಕಲಿಯುತ್ತಿದ್ದಾಳೆ. ಮಹಾಲಿಂಗೇಶ್ವರ ಯಕ್ಷಾಲಯ ಕಾವೂರು ಇದರಲ್ಲಿ ವೇದಿಕೆ ರಂಗಪ್ರವೇಶ ಮಾಡಿರುತಾಳೆ. ಭರತನಾಟ್ಯ ಕಲಿಯುತ್ತಿದ್ದು, ಸ್ಪಂದನ ಟಿವಿಯ ಕಿನ್ನರ ಮೇಳದಲ್ಲಿ ಭಾಗವಹಿಸಿ ಇತ್ತೀಚೆಗೆ ಅಜೆಕಾರಿನಲ್ಲಿ ನಡೆದ 3ನೇ ಆದಿಗ್ರಾಮೋತ್ಸವ ಸಮ್ಮೇಳನದಲ್ಲಿ ಆದಿಗ್ರಾಮೋತ್ಸವ ಬಾಲ ಪ್ರತಿಭಾ ಪುರಸ್ಕಾರ ಪಡೆದಿರುತ್ತಾಳೆ. ಕೊರೊನಾ ಸಮಯದಲ್ಲಿ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಯ  ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುತಿಸಿ ಮಂಗಳೂರಿನ ಬಾಲಪ್ರತಿಭೆ ಸಾನ್ವಿ ದೇವಿ ಪ್ರಸಾದ್ ಅವರಿಗೆ ವಾಯ್ಸ್ ಆಫ್ ಆರಾಧನಾ  2021 ರ ಅವಾರ್ಡ್ ಪಡೆದಿದ್ದಾಳೆ. ಸ್ಪಂದನ ಟಿ.ವಿಯ ರೈ ಸಿಂಗ್ ಸ್ಟಾರ್ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದು, ಸ್ಟಾರ್ ಸುವರ್ಣ ವಾಹಿನಿಯ ಸುವರ್ಣ ಸೂಪರ್ ಸ್ಟಾರ್ ನಲ್ಲೂ ಭಾಗವಹಿಸಿ ಬಹುಮಾನ ಪಡೆದಿದ್ದಾಳೆ..

ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ  ಮಗನಾದ ಶ್ರವಣ್ ಕಡಬ ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ  ಓದುತ್ತಿದ್ದಾನೆ . ಈತ ಸಂಗೀತ,  ಕೀಬೋರ್ಡ್, ಯಕ್ಷಗಾನ ತರಬೇತಿ ಪಡೆಯುತ್ತಿದ್ದೂ ಹಲವಾರು ಕಡೆ ಕಾರ್ಯಕ್ರಮಗಳನ್ನು ಸಹ ನೀಡಿದ್ದಾನೆ. ಚಿತ್ರಕಲೆ ಇವನ ಹವ್ಯಾಸವಾಗಿದೆ. ಸಂಗೀತ, ಚಿತ್ರಕಲೆ,ಕರಾಟೆ ಯಕ್ಷಗಾನದಲ್ಲಿ ಹಲವಾರು ಬಹುಮಾನಗಳನ್ನು ಪಡೆದಿರುತ್ತಾನೆ. ಸುದ್ದಿ ಬಿಡುಗಡೆ

ಪ್ರತಿಭಾ ದೀಪ ಪುರಸ್ಕಾರ ನೀಡಿ ಗೌರವಿಸಿದೆ. ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. “All kerala and karnataka open karate championchip “ನವರು ಆಯೋಜಿಸಿದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾನೆ.  “kamal martial arts academy”ಯವರು ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾನೆ. 

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ವತಿಯಿಂದ ಪ್ರತಿಭಾ ಸಿರಿ ಗೌರವ, ಸತ್ಯಶಾಂತ ಪ್ರತಿಷ್ಠಾನ  (ರಿ. ) ಇದರ ವತಿಯಿಂದ ಪ್ರತಿಭಾ ಚೇತನ ಪ್ರಶಸ್ತಿ ಹಾಗೂ ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ. )ಇದರ ವತಿಯಿಂದ ಜನಸ್ಪಂದನ ಕಲಾ ಸಿರಿ ರತ್ನ ಪ್ರಶಸ್ತಿ ಪಡೆದಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು