8:43 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು