1:00 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವ ನಾಗೇಶ್ ಮನೆಗೆ ಮುತ್ತಿಗೆ:ಗೃಹ ಸಚಿವ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?

02/06/2022, 10:36

ತುಮಕೂರು(reporterkarnataka.com):-ಪಠ್ಯಪುಸ್ತಕ ಪರಿಷ್ಕರಣೆ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರ ತಿಪಟೂರಿನ ನಿವಾಸಕ್ಕೆ ನುಗ್ಗಿದ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ತುಮಕೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಈಗಾಗಲೇ ಪೊಲೀಸರು ೧೫ ಮಂದಿಯನ್ನು ೨ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕೃತ್ಯವನ್ನು ಖಂಡಿಸುತ್ತೇನೆ. ಇದಕ್ಕೆ ತಕ್ಕಪಾಠ ಕಲಿಬೇಕಾಗುತ್ತದೆ. ಮನೆಗೆ ನುಗ್ಗುತ್ತೇನೆ ಹೆದರಿಸುತ್ತೇನೆ ಎಂಬುದು ನಡೆಯುವುದಿಲ್ಲ . ಪಠ್ಯ ಪರಿಷ್ಕರಣೆ ವಿಚಾರಕ್ಕೆ ಈ ಘಟನೆ ನಡೆದಿದೆಯೋ ಎಂಬುದರ ಮಾಹಿತಿಯಿಲ್ಲ. ಬೆಂಗಳೂರು ೫ ದಾವಣಗೆರೆ ತುಮಕೂರು , ಚಿಕ್ಕಮಂಗಳೂರು ಕಡೆಗಳಿಂದ ಇವರುಗಳು ಬಂದಿದ್ದಾರೆ. ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಹಕ್ಕಿದೆ ಆದರೆ ಮನೆಗೆ ನುಗ್ಗಿ ಗಲಬೆ ಸೃಷ್ಟಿ ಮಾಡುವುದು ಸರಿಯಲ್ಲ. ತಿಪಟೂರಿನಲ್ಲಿ ಎಲ್ಲ ಪಕ್ಷದವರು ಸೌರ್ಹಾಧತೆಯಿಂದ ಇದ್ದಾರೆ ಎಂದರು. ಈ ಘಟನೆ ನಡೆದಾಗ ಸಚಿವರು ಮನೆಯಲ್ಲಿ ಇರಲಿಲ್ಲ. ಅವರ ಪಿಎ ಹಾಗೂ ಮಗ ಇದ್ದರು. ಏಕಾಏಕಿ ಈ ಘಟನೆ ನಡಸಿರುವುದು ಖಂಡನೀಯ ಎಂದು ತಿಳಿಸಿದರು. ತಿಪಟೂರಿನಲ್ಲಿ ಎಲ್ಲರೂ ಸೌಹಾರ್ದ ವಾಗಿ ಇದ್ದೇವೆ. ಆ ಕಾರಣಕ್ಕೆ ಸೆಕ್ಯೂರಿಟಿ ನೀಡಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು