9:51 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ

17/06/2021, 19:28

ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅವರು ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಬಾಂಬ್ ಸಿಡಿಸಿದ್ದಾರೆ.

ಅರುಣ್ ಸಿಂಗ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ದಿನಗಳಲ್ಲಿ ಕೂಡ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು. ಆದರೆ ಎಚ್. ವಿಶ್ವನಾಥ್ ಅವರು ನಾಯಕತ್ವ ಬದಲಾವಣೆಯಾಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಿಎಂ ಪುತ್ರ ಎಲ್ಲ ಖಾತೆಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ನೀರಾವರಿ ಖಾತೆಯಲ್ಲೂ ಹಸ್ತಕ್ಷೇಪ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ನಾಯಕತ್ವ ಬದಲಾವಣೆ ಮಾಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಕೂಡ ಸಾಥ್ ನೀಡಿದ್ದಾರೆ. ಕೆಲವು ದಿನ ತಣ್ಣಗಾಗಿದ್ದ ಯೋಗೀಶ್ವರ್ ಅವರು ಮತ್ತೆ ಬಂಡಾಯದ ಬಾವುಟವನ್ನು ವಿಶ್ವನಾಥ ಜತೆ ಹಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು