9:26 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ

17/06/2021, 19:28

ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅವರು ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಬಾಂಬ್ ಸಿಡಿಸಿದ್ದಾರೆ.

ಅರುಣ್ ಸಿಂಗ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ದಿನಗಳಲ್ಲಿ ಕೂಡ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು. ಆದರೆ ಎಚ್. ವಿಶ್ವನಾಥ್ ಅವರು ನಾಯಕತ್ವ ಬದಲಾವಣೆಯಾಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಿಎಂ ಪುತ್ರ ಎಲ್ಲ ಖಾತೆಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ನೀರಾವರಿ ಖಾತೆಯಲ್ಲೂ ಹಸ್ತಕ್ಷೇಪ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ನಾಯಕತ್ವ ಬದಲಾವಣೆ ಮಾಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಕೂಡ ಸಾಥ್ ನೀಡಿದ್ದಾರೆ. ಕೆಲವು ದಿನ ತಣ್ಣಗಾಗಿದ್ದ ಯೋಗೀಶ್ವರ್ ಅವರು ಮತ್ತೆ ಬಂಡಾಯದ ಬಾವುಟವನ್ನು ವಿಶ್ವನಾಥ ಜತೆ ಹಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು