7:26 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಕ್ರಮ ಕಿಡ್ನಿ ಮಾರಾಟ ಜಾಲ ಬಯಲು: ದೆಹಲಿ ಪೋಲೀಸರಿಂದ ವೈದ್ಯ ಸೇರಿದಂತೆ 10 ಮಂದಿ ಬಂಧನ

02/06/2022, 15:06

ಹೊಸದಿಲ್ಲಿ(reporterkarnataka.com): ಅಕ್ರಮ ಮಾರಾಟದ ಸಾಲಿಗೆ ಈಗ ಮಾನವ ಅಂಗಾಂಗಳು ಕೂಡ ಸೇರಿವೆ.

ಅಕ್ರಮ ಕಿಡ್ನಿ ಮಾರಾಟ ದಂಧೆಯನ್ನು ದೆಹಲಿ ಪೋಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬಂಧಿತರಲ್ಲಿ ಒಬ್ಬ ಸ್ವತಃ ವೈದ್ಯನಾಗಿದ್ದು ಉಳಿದವರು ವೈದ್ಯಕೀಯ ತಂತ್ರಜ್ಞರು ಮತ್ತು ಸಹಾಯಕರಾಗಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಹೌಜ್‌ ಖಾಸ್‌ ಪ್ರದೇಶದಲ್ಲಿ ಅಕ್ರಮ ಕಿಡ್ನಿ ಕಸಿ ದಂಧೆಯ ಕುರಿತು ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ 10 ಜನರ ಜಾಲವನ್ನು ಭೇದಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಈ ಗುಂಪಿನ ಸದಸ್ಯರು ಬಡವರನ್ನು ಗುರುತಿಸಿ ಅವರಿಗೆ ಹಣದ ಆಸೆ ತೋರಿಸಿ ಕಿಡ್ನಿ ಮಾರಲು ಪುಸಲಾಯಿಸುತ್ತಿದ್ದರು. ಅವರಿಂದ ಕಿಡ್ನಿ ಪಡೆದು ಅಗತ್ಯವಿರುವ ಶ್ರೀಮಂತರಿಗೆ ಅದನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಸ್ತುತ 10 ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು