7:31 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಜೂ.3ರಂದು ವಿಶ್ವ ಬೈಸಿಕಲ್ ದಿನ ಆಚರಣೆ ; ಮಂಗಳೂರಿನಿಂದ ಉಳ್ಳಾಲದವರೆಗೆ ಸೈಕಲ್ ರ‌್ಯಾಲಿ

02/06/2022, 18:57

ಮಂಗಳೂರು (Reporterkarnataka.com) ಮಂಗಳೂರು ನೆಹರು ಯುವ ಕೇಂದ್ರದ ವತಿಯಿಂದ ದಕ್ಷಿಣ ಜಿಲ್ಲಾಡಳಿತದ ಸಹಯೋಗದೊಂದಿಗೆ ಎನ್.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಯೆನಪೊಯ ವಿಶ್ವವಿದ್ಯಾನಿಲಯ, ಎನ್.ಸಿ.ಸಿ, ಮಂಗಳೂರು ಸೈಕಲಿಂಗ್ ಕ್ಲಬ್ ಹಾಗೂ ಇತರೆ ಸಂಘಗಳ ಸಹಕಾರದೊಂದಿಗೆ ವಿಶ್ವ ಬೈಸಿಕಲ್ ದಿನವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.3 ರಂದು ಆಚರಿಸಲಾಗುವುದು ಎಂದು ನೆಹರೂ ಯುವ ಕೇಂದ್ರದ ವಿಷ್ಣು ಮೂರ್ತಿ ತಿಳಿಸಿದ್ದಾರೆ.

ಅವರು ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಸುಮಾರು 12 ಕಿಲೋಮೀಟರ್ ಸೈಕಲ್

ರ‌್ಯಾಲಿ.ಜಿಲ್ಲಾಧಿಕಾರಿಯವರ ಕಛೇರಿಯಿಂದ ಮಂಗಳಾದೇವಿ-ಮುಗೇರು-ಕಲ್ಲಾಪು-ತೊಕ್ಕೊಟ್ಟು ಮಾಸಿಕಟ್ಟೆಯಿಂದ ರಾಣಿ ಅಬ್ಬಕ್ಕ ವೃತ್ತ ಉಳ್ಳಾಲ ಇಲ್ಲಿ ಸಮಾಪನಗೊಳ್ಳುವುದು.

ರ‌್ಯಾಲಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಚಾಲನೆ ನೀಡಲಿದ್ದಾರೆ.ಹಾಗೂ ಸಮಾರೋಪ ಸಮಾರಂಭದಲ್ಲಿ ಶಾಸಕ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮವು ಉಳ್ಳಾಲ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವುದು. ಎಂದು ಮಾಹಿತಿಯನ್ನು ನೀಡಿದರು.

ಗೋಷ್ಠಿಯಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ, ನೆಹರು ಯುವ ಕೇಂದ್ರದ ಜಗದೀಶ್, ಮಂಗಳೂರು ಸೈಕ್ಲಿಂಗ್ ಕ್ಲಬ್‌ನ ಅನೀಲ್ ಶೇಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು