1:21 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಮುಖಂಡರೊಬ್ಬರ ದರ್ಬಾರ್: ನಿಯಮ ಮೀರಿ ಕಾರಿನ ವಿನ್ಯಾಸ ಮಾರ್ಪಾಡು !!: ಅಧಿಕಾರಿಗಳು ಕ್ರಮ ಕೈಗೊಳ್ಳುವರೇ? ಇಲ್ಲ ಸೆಲ್ಯೂಟ್ ಹೊಡೆಯುವರೇ?

03/06/2022, 09:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

ಬಿಜೆಪಿ ಮುಖಂಡರೊಬ್ಬರು ತನಗೆ ಮನಸ್ಸಿಗೆ ಬಂದಂತೆ ಕಾರಿನ ಮೂಲ ಬಣ್ಣ ಸೇರಿದಂತೆ ಇತರ ವಿನ್ಯಾಸಗಳಲ್ಲಿ ಮಾರ್ಪಾಡು ಮಾಡಿಕೊಂಡು ಓಡಾಡುವ ಮೂಲಕ ಅಂಧ ದರ್ಬಾರ್ ಪ್ರದರ್ಶಿಸುತ್ತಿರುವುದು ಬೆಳಕಿಗೆ ಬಂದಿದೆ .

ಇವತ ಹೆಸರು ಎಚ್ .ಸಿ .ತಿಮ್ಮೇಗೌಡ .ಊರು : ಬೆಂಗಳೂರಿನ ಬ್ಯಾಟರಾಯನಪುರ .

ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷ . ಜತೆಗೆ ಕೇಸರಿ ಫೌಂಡೇಷನ್ ನ ಸಂಸ್ಥಾಪಕ !!

ಕಾರಿಗೆ ಕಣ್ಣಿಗೆ ರಾಚುವಂಥ ಕೇಸರಿ ಬಣ್ಣ. ಹಿಂಬದಿ ಗಾಜಿನಲ್ಲಿ ಇವರ ಭಾವಚಿತ್ರದ ಜತೆಗೆ ಹುದ್ದೆಗಳ ಹೆಸರು .!!

(ಗಾಜುಗಳು ಮುಕ್ತವಾಗಿರಬೇಕು ಎಂಬ ನಿಯಮ ಇದೆ )ಬದಿಯ ಗಾಜುಗಳಿಗೂ ಬಣ್ಣ ಲೇಪನ .

ಬದಿಯ  ಭಾಗದಲ್ಲಿಯೂ ಈತನ ಭಾವಚಿತ್ರ ಜತೆಗೆ ಸಂಪರ್ಕ ಸಂಖ್ಯೆ .
ಹೀಗೆ ಅವಾಂತರಗಳ ಮೇಲೆ ಅವಾಂತರ.ಸಣ್ಣಪುಟ್ಟವರನ್ನು ಹಿಡಿದು ದಂಡ ಕಟ್ಟಿಸಿಕೊಳ್ಳುವ ಪೋಲಿಸರು , ಸಾರಿಗೆ ಇಲಾಖೆ ಅಧಿಕಾರಿಗಳು  ಈ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಮತ್ತು ಅನುಮಾನಗಳಿಗೆ ಕಾರಣವಾಗಿದೆ.

ಮುಂದೆ ವಿಧಾನಸಭೆಗೆ ಸ್ಪರ್ಧಿಸುವ ಆಕಾಂಕ್ಷಿ ಯಾಗಿದ್ದು  5 ಬಸ್ಸುಗಳಲ್ಲಿ ಜನರನ್ನು ಶೃಂಗೇರಿ – ಹೊರನಾಡು ಇನ್ನಿತರ ತೀರ್ಥಕ್ಷೇತ್ರಗಳಿಗೆ ಪ್ರವಾಸಕ್ಕೆ ಕರೆತಂದಿರುವುದು ವಿಶೇಷ .


ಸಂಬಂಧಪಟ್ಟ ಇಲಾಖೆಯವರು ಇನ್ನಾದರೂ ಕ್ರಮ ಕೈಗೊಳ್ಳುವರೇ ಅಥವಾ ಸೆಲ್ಯೂಟ್ ಹೊಡೆದು ಹಾಗೆ ಕಳಿಸುವರೇ  ಕಾದು ನೋಡಬೇಕಿದೆ .

ಇತ್ತೀಚಿನ ಸುದ್ದಿ

ಜಾಹೀರಾತು