6:48 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮುಖಂಡರೊಬ್ಬರ ದರ್ಬಾರ್: ನಿಯಮ ಮೀರಿ ಕಾರಿನ ವಿನ್ಯಾಸ ಮಾರ್ಪಾಡು !!: ಅಧಿಕಾರಿಗಳು ಕ್ರಮ ಕೈಗೊಳ್ಳುವರೇ? ಇಲ್ಲ ಸೆಲ್ಯೂಟ್ ಹೊಡೆಯುವರೇ?

03/06/2022, 09:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

ಬಿಜೆಪಿ ಮುಖಂಡರೊಬ್ಬರು ತನಗೆ ಮನಸ್ಸಿಗೆ ಬಂದಂತೆ ಕಾರಿನ ಮೂಲ ಬಣ್ಣ ಸೇರಿದಂತೆ ಇತರ ವಿನ್ಯಾಸಗಳಲ್ಲಿ ಮಾರ್ಪಾಡು ಮಾಡಿಕೊಂಡು ಓಡಾಡುವ ಮೂಲಕ ಅಂಧ ದರ್ಬಾರ್ ಪ್ರದರ್ಶಿಸುತ್ತಿರುವುದು ಬೆಳಕಿಗೆ ಬಂದಿದೆ .

ಇವತ ಹೆಸರು ಎಚ್ .ಸಿ .ತಿಮ್ಮೇಗೌಡ .ಊರು : ಬೆಂಗಳೂರಿನ ಬ್ಯಾಟರಾಯನಪುರ .

ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷ . ಜತೆಗೆ ಕೇಸರಿ ಫೌಂಡೇಷನ್ ನ ಸಂಸ್ಥಾಪಕ !!

ಕಾರಿಗೆ ಕಣ್ಣಿಗೆ ರಾಚುವಂಥ ಕೇಸರಿ ಬಣ್ಣ. ಹಿಂಬದಿ ಗಾಜಿನಲ್ಲಿ ಇವರ ಭಾವಚಿತ್ರದ ಜತೆಗೆ ಹುದ್ದೆಗಳ ಹೆಸರು .!!

(ಗಾಜುಗಳು ಮುಕ್ತವಾಗಿರಬೇಕು ಎಂಬ ನಿಯಮ ಇದೆ )ಬದಿಯ ಗಾಜುಗಳಿಗೂ ಬಣ್ಣ ಲೇಪನ .

ಬದಿಯ  ಭಾಗದಲ್ಲಿಯೂ ಈತನ ಭಾವಚಿತ್ರ ಜತೆಗೆ ಸಂಪರ್ಕ ಸಂಖ್ಯೆ .
ಹೀಗೆ ಅವಾಂತರಗಳ ಮೇಲೆ ಅವಾಂತರ.ಸಣ್ಣಪುಟ್ಟವರನ್ನು ಹಿಡಿದು ದಂಡ ಕಟ್ಟಿಸಿಕೊಳ್ಳುವ ಪೋಲಿಸರು , ಸಾರಿಗೆ ಇಲಾಖೆ ಅಧಿಕಾರಿಗಳು  ಈ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಮತ್ತು ಅನುಮಾನಗಳಿಗೆ ಕಾರಣವಾಗಿದೆ.

ಮುಂದೆ ವಿಧಾನಸಭೆಗೆ ಸ್ಪರ್ಧಿಸುವ ಆಕಾಂಕ್ಷಿ ಯಾಗಿದ್ದು  5 ಬಸ್ಸುಗಳಲ್ಲಿ ಜನರನ್ನು ಶೃಂಗೇರಿ – ಹೊರನಾಡು ಇನ್ನಿತರ ತೀರ್ಥಕ್ಷೇತ್ರಗಳಿಗೆ ಪ್ರವಾಸಕ್ಕೆ ಕರೆತಂದಿರುವುದು ವಿಶೇಷ .


ಸಂಬಂಧಪಟ್ಟ ಇಲಾಖೆಯವರು ಇನ್ನಾದರೂ ಕ್ರಮ ಕೈಗೊಳ್ಳುವರೇ ಅಥವಾ ಸೆಲ್ಯೂಟ್ ಹೊಡೆದು ಹಾಗೆ ಕಳಿಸುವರೇ  ಕಾದು ನೋಡಬೇಕಿದೆ .

ಇತ್ತೀಚಿನ ಸುದ್ದಿ

ಜಾಹೀರಾತು