7:18 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ನಿಯಮ ಉಲ್ಲಂಘನೆ; ಇಂಡಿಗೋ, ಸ್ಪೈಸ್​ಜೆಟ್​ ಬಳಿಕ ಏರ್​ ವಿಸ್ತಾರಾಗೂ ಬಿತ್ತು 10 ಲಕ್ಷ ರೂ. ದಂಡ..!

03/06/2022, 11:53

ಹೊಸದಿಲ್ಲಿ(reporterkarnataka.com): ಕೆಲ ದಿನಗಳ ಹಿಂದೆ ಇಂಡಿಗೋ ಹಾಗೂ ಸ್ಪೈಸ್​ಜೆಟ್​ ಏರ್​ಲೈನ್ಸ್​ಗೆ ದಂಡ ವಿಧಿಸಿದ್ದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಇದೀಗ ಏರ್​ ವಿಸ್ತಾರಾಗೂ 10 ಲಕ್ಷ ರೂಪಾಯಿ ದಂಡ ಹಾಕಿದೆ.

ಮಧ್ಯಪ್ರದೇಶದ ಇಂದೋರ್​​ ವಿಮಾನ ನಿಲ್ದಾಣದಲ್ಲಿ ತರಬೇತಿ ಇಲ್ಲದ ಪೈಲಟ್​​ನಿಂದ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ಮಾಡಿಸಿದ್ದಕ್ಕಾಗಿ ಈ ದಂಡ ವಿಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಡಿಜಿಸಿಎ ನೀಡಿರುವ ಟೇಕಾಫ್​ ಮತ್ತು ಲ್ಯಾಂಡಿಂಗ್​ ಕ್ಲಿಯರೆನ್ಸ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಏರ್​ಲೈನ್ಸ್​ ಕಂಪನಿಗೆ ದಂಡ ಹಾಕಲಾಗಿದೆ. ಏರ್​​ಲೈನ್ಸ್​ ಕಂಪನಿ ತೆಗೆದುಕೊಂಡಿರುವ ನಿಯಮದಿಂದ ಪ್ರಯಾಣಿಕರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇತ್ತು. ಇದೊಂದು ಗಂಭೀರ ನಿಯಮ ಉಲ್ಲಂಘನೆ ಅಪರಾಧವಾಗಿದೆ ಎಂದಿದೆ.

ಸಿಮ್ಯುಲೇಟರ್​​ನಲ್ಲಿ ಅಗತ್ಯ ತರಬೇತಿ ಪಡೆಯದ ಪೈಲಟ್​​ ವಿಮಾನ ಲ್ಯಾಂಡ್ ಮಾಡಿದ್ದು, ಫರ್ಸ್ಟ್ ಆಫೀಸರ್ ವಿಮಾನವನ್ನು ಲ್ಯಾಂಡ್ ಮಾಡುವುದಕ್ಕೂ ಮುನ್ನ ಸಿಮ್ಯುಲೇಟರ್​​ನಲ್ಲಿ ತರಬೇತಿ ಪಡೆದಿರಬೇಕು. ಈ ರೀತಿ ತರಬೇತಿ ಪಡೆದವರನ್ನು ಲ್ಯಾಂಡ್ ಮಾಡುವುದಕ್ಕೆ ಅನುಮತಿಸುವ ಕ್ಯಾಪ್ಟನ್ ಸಹ ತರಬೇತಿ ಪಡೆದಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 30ರಂದು ಈ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು